ವೃತ್ತಿ ಶಿಕ್ಷಣ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ,

0
108

ಶಿವಮೊಗ್ಗ, ಡಿಸೆಂಬರ್ 27 :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಹಾಗೂ ಜಾಗೃತಿ ಯುವಕ ಸಂಘ, ಮಂಡೇನಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ‘ಮೂಲ ವೃತ್ತಿ ಶಿಕ್ಷಣ ತರಬೇತಿ’ ಕಾರ್ಯಕ್ರಮವನ್ನು ಹೊಳಲೂರಿನ ಶ್ರೀ ಮಾರುತಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಈ ತರಬೇತಿ ಕಾರ್ಯಕ್ರಮದಲ್ಲಿ ಪದವಿ ವಿದ್ಯಾರ್ಥಿಗಳಿಗೆ 03 ತಿಂಗಳ ಅವಧಿಯ ಕಂಪ್ಯೂಟರ್ ಕೋರ್ಸ್‍ನ್ನು ಉಚಿತವಾಗಿ ನೀಡಲಾಗುತ್ತಿದ್ದು ಡಿ.23 ರಂದು ಕಾಲೇಜಿನ ಪ್ರಾಂಶುಪಾಲರಾದ ರಾಜಪ್ಪ ಇವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಎನ್‍ಎಸ್‍ಎಸ್ ಕಾರ್ಯಕ್ರಮ ನಿಯೋಜಕ ಶಶಿಕುಮಾರ್, ನೆಹರು ಯುವ ಕೇಂದ್ರದ ಕಾರ್ಯಕರ್ತ ದುತೀಂದ್ರ, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here