ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ರಾಜ್ಯಮಟ್ಟದ ಪ್ರಬಂಧ/ಭಿತ್ತಿ ಚಿತ್ರಸ್ಪರ್ಧೆ.

0
129

ಬಳ್ಳಾರಿ,ಡಿ.30 :2021-22 ನೇ ಸಾಲಿನಲ್ಲಿ ರಾಷ್ಟೀಯ ಮತದಾರರ ದಿನಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಪ್ರೌಢಶಾಲಾ/ಪದವಿ ಪೂರ್ವ/ಪದವಿ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಕನ್ನಡ/ಇಂಗ್ಲೀಷ್ ಪ್ರಬಂಧ ಹಾಗೂ ಭಿತ್ತಿ ಚಿತ್ರ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಮುಖ್ಯಚುನಾವಣಾಧಿಕಾರಿಗಳ ಕಚೇರಿಯ ಸ್ವೀಪ್ ವಿಭಾಗದ ವತಿಯಿಂದ ಕೆ-ಸ್ವಾನ್ ವಿಡಿಯೋ ಕಾನ್ಪರೆನ್ಸ್ ಮೂಲಕ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಗುರುವಾರ ಏರ್ಪಡಿಸಲಾಗಿತ್ತು.
ಬಳ್ಳಾರಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರಬಂಧ ಸ್ಪರ್ಧೆಯಲ್ಲಿ ಕನ್ನಡ ಬಾಷೆಯಲ್ಲಿ 03, ಇಂಗ್ಲಿಷ್ 03 ಹಾಗೂ ಭಿತ್ತಿ ಚಿತ್ರ ಸ್ಪರ್ಧೆಗೆ 03 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 09 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜಿಪಂ ಯೋಜನಾ ನಿರ್ದೇಶಕರು ಹಾಗೂ ಸ್ವೀಪ್ ನೋಡಲ್ ಅಧಿಕಾರಿಗಳಾದ ಜಾನಕಿರಾಂ ಸೇರಿದಂತೆ ಅನೇಕರು ಇದ್ದರು.

LEAVE A REPLY

Please enter your comment!
Please enter your name here