ಕರಾಸಕಅ ನಿಗಮದಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನ

0
141

ಶಿವಮೊಗ್ಗ, ಜನವರಿ 13: ಡಾ|| ಬಿ.ಆರ್. ಅಂಬೇಡ್ಕರ್ ನಿಗಮದ ಅಡಿಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮವು 2021-22ನೇ ಸಾಲಿನ ಸಫಾಯಿ ಕರ್ಮಚಾರಿ/ಪೌರ ಕಾರ್ಮಿಕರು ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್‍ಗಳ 8 ರಿಂದ ಪದವಿಗಳಲ್ಲಿ ಓದುತ್ತಿರುವ ಮಕ್ಕಳಿಗೆ ಆನ್‍ಲೈನ್ ಪಾಠ/ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್ ವಿತರಿಸಲು ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ನಿಗಮದ www.ksskdc.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಹಾಗೂ ಆಪ್‍ಲೈನ್‍ನಲ್ಲಿ ಅರ್ಜಿಯನ್ನು ದಿ: 31/01/2022ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-224349 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here