ಸರಳವಾಗಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

0
401

ರಾಯಚೂರು.ಫೆ.01:- ಕೋವಿಡ್-19ರ ಹಿನ್ನೆಲೆಯಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಆರ್.ಟಿ.ಓ ವೃತ್ತದಲ್ಲಿರುವ ಮಡಿವಾಳ ಮಾಚಿದೇವ ಪುತ್ಥಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಕೆ.ಮುನಿಸ್ವಾಮಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವಿ. ನಾಯಕ, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷರಾದ ಬಿ.ವಿರೂಪಾಕ್ಷಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ಡಾ. ದಂಡಪ್ಪ ಬಿರಾದಾರ್ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here