ಹೊಸಪೇಟೆ(ವಿಜಯನಗರ)ಫೆ.01: ಕನ್ನಡ ವಿಶ್ವವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಕೆ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ವಿವಿ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ ಎಂದು ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಜುನಾಥ ಅವರು ಪ್ರಾಧ್ಯಾಪಕ ಡಾ.ಎಸ್.ವೈ.ಸೋಮಶೇಖರ ಅವರ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಕೋಟೆ ಪರಿಸರದಲ್ಲಿ ಮಳೆಕೊಯ್ಲು ವ್ಯವಸ್ಥೆ(ಚಾರಿತ್ರಿಕ ಅಧ್ಯಯನ)’’ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.
ಕನ್ನಡ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿಎಚ್ಡಿ ಪಡೆಯಲು ಅರ್ಹರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.