ಗ್ರಾಮೀಣ ಬದುಕಿಗೆ ನರೇಗಾ ಯೋಜನೆ ಉಪಯುಕ್ತ: ಸುಜಾ ಕುಶಾಲಪ್ಪ

0
106

ಮಡಿಕೇರಿ ಫೆ.03:-ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಕಡುಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಉಪಯೋಗವಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಪಂಚಾಯತ್, ವಿರಾಜಪೇಟೆ ತಾಲೂಕು ಪಂಚಾಯತ್, ಕೆ.ಬಾಡಗ ಗ್ರಾಮ ಪಾಂಚಾಯತ್ ಮತ್ತು ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿರಾಜಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ನಡೆದ 16 ನೇ ವರ್ಷದ ನರೇಗಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನರೇಗಾ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ತರ ಯೋಜನೆ ಇದಾಗಿದೆ. ಮುಖ್ಯವಾಗಿ ವಲಸೆ ತಡೆಗಟ್ಟಿ ಇರುವಲ್ಲಿಯೇ ಕೆಲಸ ನೀಡುವ ಯೋಜನೆಯಾಗಿದೆ. ವೈಯಕ್ತಿಕ ಕಾಮಗಾರಿ ಅಡಿ ಜೀವಿತಾವಧಿಯಲ್ಲಿ ರೂ.2.5 ಲಕ್ಷದ ವರೆಗೆ ಉಚಿತ ಕಾಮಗಾರಿ ಪಡೆಯಬಹುದು ಎಂದರು.

2002 ಫೆಬ್ರವರಿ 2 ನೇ ತಾರೀಖು ದೇಶದ 200 ಹಿಂದುಳಿದ ಜಿಲ್ಲೆಗಳಲ್ಲಿ ಪ್ರಥಮವಾಗಿ ನರೇಗಾ ಯೋಜನೆ ಜಾರಿಗೊಳಿಸಲಾಯಿತು. ಈ ದಿನವನ್ನು ನರೇಗಾ ದಿನವನ್ನಾಗಿ ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ನರೇಗಾ ನೌಕರರ ಸಂಘದ ಸದಸ್ಯರು ಗ್ರಾಮ ಮಟ್ಟದಲ್ಲಿ ಯೋಜನೆಗಳ ಅನುμÁ್ಠನ ಗೊಳಿಸುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದಾರೆ ಎಂದರು.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದ ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮ ರೀತಿಯ ಉದ್ಯಾನವಗಳು ನಿರ್ಮಾಣವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ಕೂಡ ಗ್ರಾಮೀಣ ಭಾಗದಲ್ಲಿ ಜಾಬ್ ಕಾರ್ಡ್‍ಗಳನ್ನು ಹೊಂದಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ಅವರು ಮಾತನಾಡಿ, ಕೆ.ಬಾಡಗ ವಿರಾಜಪೇಟೆ ತಾಲೂಕಿನಲ್ಲಿ ಚಿಕ್ಕ ಗ್ರಾಮಪಂಚಾಯಿತಿ ಆಗಿದ್ದರೂ ಸಹ ತಾಲೂಕಿನಲ್ಲಿಯೇ ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಿದೆ. ಜೊತೆಗೆ ಪರಿಶಿಷ್ಟ ಪಂಗಡದವರ ಭಾಗವಹಿಸುವಿಕೆಯಲ್ಲಿಯೂ ಮುಂದಿದೆ. ಈ ನಿಟ್ಟಿನಲ್ಲಿ ಕೆ.ಬಾಡಗ ಪಂಚಾಯಿತಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಕರ್ನಾಟಕ ರಾಜ್ಯ ನರೇಗಾ ನೌಕರರ ಸಂಘ ಸ್ಥಾಪನೆಯಾಗಿರುವುದು ಉತ್ತಮ ವಿಚಾರವಾಗಿದೆ. ಜಿಲ್ಲಾ ಪಂಚಾಯತ್ ಮತ್ತು ಎಲ್ಲಾ ಅಧಿಕಾರಿ ವೃಂದ ಸಂಘವು ಕೈಗೊಳ್ಳುವ ಒಳ್ಳೆಯ ಕೆಲಸಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ವತಿಯಿಂದ ಮನರೇಗಾ ಯೋಜನೆಗೆ ಅಗತ್ಯವಿರುವ ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಈ ಬಾರಿ ಅವಧಿಗೂ ಮುನ್ನವೇ ಜಿಲ್ಲೆಗೆ ನೀಡಲಾಗಿದ್ದ 7 ಲಕ್ಷ ಮಾನವದಿನಗಳ ಸೃಜನೆಯ ಗುರಿಯನ್ನು ಸಾಧಿಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ವಿರಾಜಪೇಟೆ ತಾ.ಪಂ.ಇಒ ಅಪ್ಪಣ್ಣ ಅವರು ನರೇಗಾ ದಿನಾಚರಣೆಯ ವಿಶೇಷತೆಗಳ ಬಗ್ಗೆ ತಿಳಿಸಿದರು. ಮಡಿಕೇರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅವರು ನರೇಗ ಯೋಜನೆಯನ್ನು ಪ್ರತಿಯೊಬ್ಬರೂ ಸದ್ಭಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಪಿಡಿಒ ಸಂಘದ ಜಿಲ್ಲಾಧ್ಯಕ್ಷರು ಮತ್ತು ಸೋಮವಾರಪೇಟೆ ತಾಲೂಕು ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರವೀಶ್ ಅವರು ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಐಇಸಿ ಸಂಯೋಜಕ ಪವನ್ ಕುಮಾರ್ ನರೇಗಾ ಯೋಜನೆಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮನರೇಗಾ ಯೋಜನೆಯ ಅನುಷ್ಠಾನದಲ್ಲಿ ಮುಖ್ಯ ಪಾತ್ರವಹಿಸುವ ಜೊತೆಗೆ ನರೇಗಾ ನೌಕರರಿಗೆ ಅಗತ್ಯ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.
ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಅವರು ಇ-ಶ್ರಮ ಪೋರ್ಟಲ್ ನಲ್ಲಿ ನೋಂದಾವಣಿ ಮಾಡಿಕೊಳ್ಳುವ ಬಗ್ಗೆ ತಿಳಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರು, ಉಪಾಧ್ಯಕ್ಷರಾದ ರೀಟಾ ವಿಜಯ, ಸದಸ್ಯರಾದ ರಾಧಾ, ರಿತೇಶ್ ಬಿದ್ದಪ್ಪ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರುಗಳಾದ ಶ್ರೀನಿವಾಸ್, ಹೇಮಂತ್ ಮತ್ತು ಪಿಡಿಒ ಪೂಣಚ್ಚ, ಇತರರು ಇದ್ದರು.
ನರೇಗಾ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಆರೋಗ್ಯ ಶಿಬಿರ, ಸಸಿ ನೆಡುವ ಕಾರ್ಯಕ್ರಮ, ಸ್ವಚ್ಛತಾ ಆಂದೋಲನ, ನರೇಗಾ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 100 ದಿನ ಪೂರೈಸಿದ ನರೇಗಾ ಕಾರ್ಮಿಕ ಮಹಿಳೆ ಶಾಲಿನಿ ಅವರನ್ನು ಅಭಿನಂದಿಸಲಾಯಿತು. ನರೇಗಾ ನೌಕರರ ಸಂಘದ ವತಿಯಿಂದ ಗ್ರಾಮದ ಶಾಲಾವರಣದಲ್ಲಿ ಸ್ಚಚ್ಛತಾ ಶ್ರಮದಾನ ಜರುಗಿತು.
ಗ್ರಾಮ ಕಾಯಕ ಮಿತ್ರರಾದ ಉಷಾ ಅವರಿಗೆ ಆಯುಕ್ತಾಲಯದಿಂದ ನೀಡಲಾಗಿದ್ದ ಸೀರೆಯನ್ನು ಉಪ ಕಾರ್ಯದರ್ಶಿ ಅವರು ವಿತರಿಸಿದರು.

LEAVE A REPLY

Please enter your comment!
Please enter your name here