ಬಳ್ಳಾರಿ,ಫೆ.08 : ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಶನ್ ಕಾರ್ಯಕ್ರಮದ ಅಡಿ 2021-22ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜಾನಪದ ಕಲಾ ಪ್ರದರ್ಶನ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿವ ಸಲುವಾಗಿ ಅರ್ಹ ಜಾನಪದ ಕಲಾ ತಂಡಗಳನ್ನು ಆಯ್ಕೆ ಪ್ರಕ್ರಿಯೆ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ವರ ರಂಗಣ್ಣನವರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾನಪದ ಕಲಾತಂಡಗಳ ಮೂಲಕ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಅನುಭವ, ಕಲೆ ಅಭಿವ್ಯಕ್ತಿ, ಸಂಗೀತ ಪರಿಕರಗಳ ಆಯ್ಕೆ, ಸೃಜನಶೀಲತೆ, ಪ್ರಸ್ತುತಪಡಿಸುವಿಕೆ, ವಸ್ತ್ರ ಧರಿಸುವಿಕೆ ಆಧಾರದ ಮೇರೆಗೆ ಆಯ್ಕೆ ಮಾಡಲಾಗುತ್ತದೆ ಎಂದರು.
ಅವಳಿ ಜಿಲ್ಲೆಗಳಿಂದ ಒಟ್ಟು 15 ಜಾನಪದ ಕಲಾತಂಡಗಳು ಭಾಗವಹಿಸಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪ್ರದರ್ಶನ ನೀಡಿದವು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳಾದ ಡಾ.ವೀರೇಂದ್ರಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ಆರೋಗ್ಯ ಇಲಾಖೆಯ ಡಾ.ಆನಂದ, ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಇನ್ನೀತರರು ಇದ್ದರು.