ಧಾರವಾಡ:ಫೆ.10: ಧಾರವಾಡ ಶಹರ ವಿಯದಲ್ಲಿ ಬರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ತಿಗಳಿಗಾಗಿ ಉಚಿತ ಕಣ್ಣು ತಪಾಸಣೆ ಹಾಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಫೆಬ್ರವರಿ 9 ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ವೈದ್ಯರ ತಂಡದಿಂದ ಸುಮಾರು 133 ಮಕ್ಕಳ ಕಣ್ಣಿನ ದೋಷ ತಪಾಸಣೆ ಮಾಡಲಾಯಿತು.
ಆರೋಗ್ಯ ಇಲಾಖೆಯಿಂದ 103 ಮಕ್ಕಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಯಿತು.
ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಶಬಿರ ಉದ್ಘಾಟಿಸಿದರು. ಮಹಾನಗರ ಪಾಲಿಕೆಯ ಸದಸ್ಯೆ ನೀಲವ್ವ ಅರವಳದ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ. ಶಶಿ ಪಾಟೀಲ, ಎಸ್ಡಿಎಮ್ಸಿ ಅಧ್ಯಕ್ಷ ಶಂಕರ ಅರವಳದ, ಸಮನ್ವಯಾಧಿಕಾರಿ ಮಂಜುನಾಥ ಅಡಿವೇರ, ಡಾ. ನಿಧಿ, ಸಂಪನ್ಮೂಲ ಶಿಕ್ಷಕರಾದ ಗಿರಿಜಾ ಪಾಟೀಲ, ಎಸ್.ಎಸ್. ಜೋಶಿ, ಎಂ. ಪಿ. ದೊಡಮನಿ, ಎಸ್.ಬಿ. ಹಿರೇಮಠ, ಎಸ್.ಪಿ. ಮಠಪತಿ ಮತ್ತು ಕೆ.ಸಿ. ಹಿರೇಮಠ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.