ತಂಬಾಕು ಕಾಯ್ದೆ ಉಲ್ಲಂಘನೆ 20 ಪ್ರಕರಣ ದಾಖಲು.

0
115

ದಾವಣಗೆರೆ:ಫೆ.18:-ದಾವಣಗೆರೆ ನಗರದಲ್ಲಿ ಶೈಕ್ಷಣಿಕ ಸಂಸ್ಥೆಗಳ 100 ಗಜದ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿರುವುದು ಸಮೀಕ್ಷೆಯಿಂದ ತಿಳಿದು ಬಂದಿದ್ದು. ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003 ರ ಅಡಿಯಲ್ಲಿ ದಾವಣಗೆರೆ ನಗರದ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳ ಸುತ್ತ ಹಾಗೂ ಇತರೆ ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವವರ ಮೇಲೆ ಸೆಕ್ಷನ್-4 ರ ಅಡಿಯಲ್ಲಿ 16 ಪ್ರಕರಣ 2000 ರೂ ದಂಡ, ಸೆಕ್ಷನ್-6ಎ ಅಡಿಯಲ್ಲಿ 2 ಪ್ರಕರಣ 300 ರೂ ದಂಡ, 6ಬಿ ಅಡಿಯಲ್ಲಿ 2 ಪ್ರಕರಣ 300 ರೂ ದಂಡ ಒಟ್ಟು 20 ಪ್ರಕರಣ 2600 ರೂ ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಗಿದೆ.

ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ ಮಾತನಾಡಿ, ಜಿಲ್ಲೆಯಾದ್ಯಂತ ಶೈಕ್ಷಣಿಕ ಸಂಸ್ಥೆಯ 100 ಗಜದ ಒಳಗೆ ಇರುವ ತಂಬಾಕು ಉತ್ಪನ್ನಗಳ ಅಂಗಡಿ ಮಾಲಿಕರು ತಂಬಾಕು ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಬೇಕು, ಇಲ್ಲವಾದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋದೊಂದಿಗೆ ಕೋಟ್ಪಾ ಕಾನೂನು ಅನ್ವಯ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.
ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲಿಕರು ಧೂಮಪಾನ ನಿಷೇಧದ ನಾಮಫಲಕವನ್ನು ಕಟ್ಟುನಿಟ್ಟಾಗಿ ಪ್ರದರ್ಶಿಸಲು ಹಾಗೂ ಅಳವಡಿಸಲು ತಂಡ ಸೂಚಿಸಿತು.

ತಂಬಾಕು ತನಿಖಾ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರ ಸತೀಶ್ ಕಲಹಾಳ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟಾಚಲ ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಾಯತ್ರಮ್ಮ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀಶೈಲಪ್ಪ, ಮಹಾನಗರ ಪಾಲಿಕೆಯ ಓಮೇಶ್, ಸಹಾಯಕ ಪೊಲೀಸ್ ಉಪ ನಿರೀಕ್ಷಕ, ಕೆ. ಪರುಶುರಾಮ್ ನಾಯಕ್ ಹಾಜರಿದ್ದರು.

LEAVE A REPLY

Please enter your comment!
Please enter your name here