ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಕಾಶ್ ತೋರಣಗಲ್ಲು ಆಯ್ಕೆ

0
168

ಸಂಡೂರು:ಪೆ:18:-ಬಳ್ಳಾರಿ ಜಿಲ್ಲೆಯ ಬಾರತೀಯ ಜನತಾ ಪಾರ್ಟಿಯ ಬಳ್ಳಾರಿ ಜಿಲ್ಲಾ ಯುವ ಮೋರ್ಚಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗಿದೆ

ತಾಲೂಕಿನ ತೋರಣಗಲ್ಲು ಗ್ರಾಮದ ಪ್ರಕಾಶ್ ಎಂಬುವವರನ್ನು ಬಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಘಟಕಕ್ಕೆ ಬಳ್ಳಾರಿ ಜಿಲ್ಲೆಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಯೆಂದು ಬಾಜಪಾ ಬಳ್ಳಾರಿ ಜಿಲ್ಲಾ ಯುವ ಮೋರ್ಚಾ ಘಟಕದ ಅಧ್ಯಕ್ಷರಾದ ಅರ್. ಸೋಮಶೇಖರಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವ ಮೋರ್ಚಾದ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಅವರಿಗೆ ಸಂಡೂರು ತಾಲೂಕು ಭಾರತೀಯ ಜನತಾ ಪಾರ್ಟಿಯ ಸಂಡೂರು ಮಂಡಲ ಅಧ್ಯಕ್ಷರಾದ ಜಿ.ಟಿ.ಪಂಪಾಪತಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ಪಕ್ಷ ಬಲಪಡಿಸಲು ಶ್ರಮವಹಿಸಬೇಕೆಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here