ಬಳ್ಳಾರಿ: ಎಸಿಬಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮಾ.03 ಮತ್ತು 04 ರಂದು

0
104

ಬಳ್ಳಾರಿ,ಮಾ.02 : ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಾ.03 ಮತ್ತು 04ರಂದು ಎಸಿಬಿ ಅಧಿಕಾರಿಗಳು ಭೇಟಿ ನೀಡಿ ಜನ ಸಂಪರ್ಕ ಮತ್ತು ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಅರಿವು ಮೂಡಿಸುವ ಮೂಲಕ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಭ್ರಷ್ಟಚಾರ ನಿಗ್ರಹ ದಳದ ಪೊಲೀಸ್ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.03ರಂದು ಸಂಡೂರಿನ ಪ್ರವಾಸಿ ಮಂದಿರದಲ್ಲಿ ಡಿ.ಎಸ್.ಪಿ ಹಾಗೂ ಪೊಲೀಸ್ ಇನ್ಸ್‍ಪೆಕ್ಟರ್-1 ಅವರು ಬೆಳಗ್ಗೆ 11ರಿಂದ ಮದ್ಯಾಹ್ನ 2ರವರೆಗೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ಮಾ.04ರಂದು ಸಿರುಗುಪ್ಪದ ಪ್ರವಾಸಿ ಮಂದಿರದಲ್ಲಿ ಡಿ.ಎಸ್.ಪಿ ಹಾಗೂ ಪೊಲೀಸ್ ಇನ್ಸ್‍ಪೆಕ್ಟರ್-2 ಅವರು ಬೆಳಗ್ಗೆ 11ರಿಂದ ಮದ್ಯಾಹ್ನ 2ರವರೆಗೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here