ಮುರಾರ್ಜಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ

0
119

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ (ಸಿದ್ದಾಪುರ ) ಮುರಾರ್ಜಿ ಶಾಲೆಯಲ್ಲಿ ಇಂದು ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಶಾರದಾ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರವೀಣ್ ಕುಮಾರ್ ಅವರು ಮಾತನಾಡಿ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ತಿಪ್ಪೇರುದ್ರಪ್ಪ, ಅನಿತಾ, ದಿಲೀಪ್ ಕುಮಾರ್, ಪ್ರಕಾಶ್, ಮಧು,ಕಾರ್ತಿಕ್, ನವೀನ್, ಮಾರಯ್ಯ, ಸುಜಾತ, ಹಾಗೂ ಆರೋಗ್ಯ ಇಲಾಖೆಯವರು ಮಲ್ಲಯ್ಯ, ಹುಲೇಶ, ಹಾಗೂ ಸಿಬ್ಬಂದಿ ವರ್ಗದವರು ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

-ಮಂಜುನಾಥ್. ಹೆಚ್

LEAVE A REPLY

Please enter your comment!
Please enter your name here