ಮಡಿಕೇರಿ ಮಾ.07:-ಭಾರತ ಸ್ಕೌಟ್ಸ್ ಮತ್ತು ಗೈಡ್ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಕೊಡಗು ಜಿಲ್ಲೆಗೆ ಹೊಸದಾಗಿ ಆಗಮಿಸಿರುವ ಪೆÇಲೀಸ್ ವರಿಷ್ಠಾಧಿಕಾರಿಗಳು ಆದ ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷರೂ ಆಗಿರುವ ಅಯ್ಯಪ್ಪ ಅವರನ್ನು ನಗರದ ಎಸ್.ಪಿ. ಕಚೇರಿಯಲ್ಲಿ ಭೇಟಿ ಮಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಗೈಡ್ನ ಸ್ಕಾರ್ಫ್ ಧರಿಸಿ ಹೂಗುಚ್ಛ ನೀಡುವುದರ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಬೇಬಿ ಮ್ಯಾಥ್ಯೂ ಸಂಸ್ಥೆಯ ಚಟುವಟಿಕೆಗಳಿಗೆ ಸಹಕರಿಸುವಂತೆ ಎಸ್.ಪಿ.ಅವರಲ್ಲಿ ಮನವಿ ಮಾಡಿದರು.
ತಾನು ಕೂಡ ವಿದ್ಯಾರ್ಥಿ ದಿಸೆಯಿಂದಲೇ ಸ್ಕೌಟ್ಸ್ ಸಂಸ್ಥೆಯ ವಿದ್ಯಾರ್ಥಿಯಾಗಿ ಸ್ವಯಂ ಸೇವಕನಾಗಿ ದುಡಿದಿದ್ದೇನೆ. ಜಿಲ್ಲೆಯಲ್ಲಿ ಸಂಸ್ಥೆಯ ವತಿಯಿಂದ ನಡೆಯುವ ಚಟುವಟಿಕೆಗಳಿಗೆ ಸದಾ ಪೆÇ್ರೀತ್ಸಾಹ ನೀಡಲಾಗುವುದು ಎಂದು ಅಯ್ಯಪ್ಪ ಅವರು ಪ್ರತಿಕ್ರಿಯಿಸಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಹಾಗೂ ಉತ್ತಮ ನಾಯಕತ್ವ ಬೆಳೆಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಸಹಕಾರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ನ ಆಯುಕ್ತ ಜಿಮ್ಮಿ ಸಿಕ್ವೇರ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ ಉಪಸ್ಥಿತರಿದ್ದರು.