ಮಡಿಕೇರಿಯಲ್ಲಿ ಅರಣ್ಯ, ಜಲದಿನ ಆಚರಣೆ:
ಅರಣ್ಯ, ಜಲ ಸಂರಕ್ಷಣೆಗೆ ಒತ್ತು ನೀಡಲು ಜಿಲ್ಲಾಧಿಕಾರಿ ಡಾ ಸತೀಶ್ ಕರೆ:

0
101

ಮಡಿಕೇರಿ ಮಾ.21:-ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಅರಣ್ಯ ಹಾಗೂ ಜಲ ಸಂರಕ್ಷಣೆಯೊಂದಿಗೆ ಪ್ರಾಣಿ- ಪಕ್ಷಿಗಳ ಸಂಕುಲ ಸೇರಿದಂತೆ ಜೀವಿ ವೈವಿಧ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ಸೋಮವಾರ ಕರೆ ನೀಡಿದ್ದಾರೆ.
ಕೊಡಗು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಅರಣ್ಯ ದಿನ ಹಾಗೂ ವಿಶ್ವ ಜಲ ದಿನಾಚರಣೆ: 2022 ರ ಸಂದರ್ಭದಲ್ಲಿ ಪರಿಸರ ಮಾಹಿತಿಯ ಭಿತ್ತಿಪತ್ರ ಬಿಡುಗಡೆಗೊಳಿಸಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಪ್ರತಿಯೊಬ್ಬರೂ ನೆಲ-ಜಲ, ಅರಣ್ಯ, ಪರಿಸರ, ವನ್ಯಜೀವಿಗಳು ಸೇರಿದಂತೆ ಜೀವ ವೈವಿಧ್ಯವನ್ನು ಸಂರಕ್ಷಣೆ ಮಾಡುವುದರೊಂದಿಗೆ ನಮ್ಮ ಸುತ್ತಲಿನ ಪರಿಸರದಲ್ಲಿ ಮರ-ಗಿಡಗಳ ಸಂರಕ್ಷಣೆಯೊಂದಿಗೆ ಜಲ ಸಂರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳು,ಮುಖ್ಯೋಪಾಧ್ಯಾಯರಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಣ್ಮರೆಯಾಗುತ್ತಿರುವ ಗುಬ್ಬಚ್ಚಿ ಸೇರಿದಂತೆ ಪಕ್ಷಿ ಸಂಕುಲ ಸಂರಕ್ಷಿಸಲು ಶಿಕ್ಷಕರು ಮಕ್ಕಳಿಗೆ ಅರಿವು ಮೂಡಿಸುವುದರೊಂದಿಗೆ ಅವರಿಗೆ ತಿಳುವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ನಮ್ಮ ಸುತ್ತಲಿನ ಪರಿಸರದಲ್ಲಿ ಬೇಸಿಗೆ ಅವಧಿಯಲ್ಲಿ ಪಕ್ಷಿಗಳಿಗೆ ನೀರು ಮತ್ತು ಕಾಳುಗಳನ್ನು ನೀಡುವ ಮೂಲಕ ಅವುಗಳ ಸಂತತಿಯನ್ನು ವೃದ್ಧಿಸಬೇಕು. ಮನೆಯಂಗಳ, ಮೇಲ್ಛಾವಣಿ ಮತ್ತು ತಾರಸಿ ಮನೆಗಳ ಮೇಲೆ ಪಕ್ಷಿಗಳಿಗೆ ಪೂರಕವಾದ ವಾತಾವರಣ ಕಲ್ಪಿಸುವ ಮೂಲಕ ಅವುಗಳನ್ನು ರಕ್ಷಿಸಬೇಕಿದೆ ಎಂದರು.
ಮಕ್ಕಳಿಗೆ ಪಕ್ಷಿ ಸಂಕುಲ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಕೃತಕ ಗೂಡುಗಳನ್ನು ಒದಗಿಸುವ ಮೂಲಕ ಮಕ್ಕಳಲ್ಲಿ ಪರಿಸರ ಹಾಗೂ ಜೀವಿ ಸಂಕುಲಗಳ ಸಂರಕ್ಷಣೆಗೆ ಶಿಕ್ಷಕರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸತೀಶ್ ಹೇಳಿದರು.
ವಿಶ್ವ ಅರಣ್ಯ ದಿನ ಹಾಗೂ ವಿಶ್ವ ಜಲ ದಿನದ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಪರಿಸರ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್ ಅವರು ಶಾಲೆಗಳಲ್ಲಿ ಇಕೋ ಕ್ಲಬ್ ವತಿಯಿಂದ ಮಕ್ಕಳಿಗೆ ಪರಿಸರ ಸ್ನೇಹಿ ಚಟುವಟಿಕೆಗಳ ಮೂಲಕ ಅವರಲ್ಲಿ ಪರಿಸರ ಪ್ರಜ್ಞೆ ಮೂಡಿಸಲಾಗುತ್ತಿದೆ ಎಂದರು.
ನಾವು ಪ್ರತಿದಿನವೂ ಪರಿಸರ ದಿನ ಆಚರಿಸುವ ಮೂಲಕ ಅರಣ್ಯ ಮತ್ತು ಜಲ ಸಂರಕ್ಷಣೆ, ಪ್ರಾಣಿ- ಪಕ್ಷಿ ಸಂಕುಲ ಹಾಗೂ ಜೀವ ವೈವಿಧ್ಯತೆ ಸಂರಕ್ಷಿಸುವ ದಿಸೆಯಲ್ಲಿ ಕಾರ್ಯೋನ್ಮುಖರಾಗಲು ಇಂತಹ ಪರಿಸರ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಶಾಲಾ ಮಕ್ಕಳು ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಬ್ಬಚ್ಚಿ ಮತ್ತಿತರ ಪಕ್ಷಿಗಳಿಗೆ ಗೂಡು ನಿರ್ಮಿಸುವ ಮೂಲಕ ಅವುಗಳಿಗೆ ನೀರು ಮತ್ತು ಆಹಾರ ನೀಡುತ್ತಿರುವುದು ಜಿಲ್ಲೆಯ ಅಲ್ಲಲ್ಲಿ ಕಂಡು ಬಂದಿದೆ ಎಂದು ಪ್ರೇಮ್ ಕುಮಾರ್ ಅವರು ತಿಳಿಸಿದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಯ್ಯಪ್ಪ ಪರಿಸರ ಮಾಹಿತಿಯುಳ್ಳ ಘೋಷಣಾ ಫಲಕಗಳನ್ನು ಬಿಡುಗಡೆಗೊಳಿಸಿದರು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಾಧಿಕಾರಿ ಕೆ. ಕೃಷ್ಣಪ್ಪ, ಚಾಮರಾಜನಗರ ಡಯಟ್ ಪ್ರಾಂಶುಪಾಲ ಎಚ್.ಕೆ.ಪಾಂಡು, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ.ಮಂಜುನಾಥ್, ಶ್ರೀಶೈಲ ಬೀಳಗಿ, ಕೆ.ವಿ.ಸುರೇಶ್, ಸಿಪಿಐ ಮೇದಪ್ಪ, ನಗರಸಭೆ ಆಯುಕ್ತರಾದ ರಾಮದಾಸ್, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ್, ಜಿಲ್ಲೆಯ ವಿವಿಧ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಇದ್ದರು.
ಚಿತ್ರ : ಮಡಿಕೇರಿಯಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಅರಣ್ಯ ದಿನ, ವಿಶ್ವ ಜಲ ದಿನಾಚಣೆ ಸಂದರ್ಭದಲ್ಲಿ ಪರಿಸರದ ಭಿತ್ತಿಪತ್ರ ಪ್ರದರ್ಶಿಸಿದ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು.ಎಸ್.ಪಿ.ಅಯ್ಯಪ್ಪ, ಡಿಡಿಪಿಐ ವೇದಮೂರ್ತಿ, ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಪ್ರಾಂಶುಪಾಲ ಪಾಂಡು, ಕೆ.ಕೃಷ್ಣಪ್ಪ, ವೆಂಕಟನಾಯಕ್ ಇದ್ದಾರೆ.

LEAVE A REPLY

Please enter your comment!
Please enter your name here