ರಾಯಪುರ ಗ್ರಾಪಂ ಯರ್ರನಹಳ್ಳಿಯಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿಗೆ ಚಾಲನೆ, ಸದಸ್ಯತ್ವವನ್ನು ಪಡೆಯಲು ನೂಕುನುಗ್ಗಲು.!!

0
572

ಚಿತ್ರದುರ್ಗ:26:ಮಾ:-ಮೊಳಕಾಲ್ಮೂರು ತಾಲೂಕು ರಾಯಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯರ್ರನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಡಿಜಿಟಲ್ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಪಕ್ಷದ ಸದಸ್ಯತ್ವ ನೋಂದಣಿ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಳ್ಳಳು ಜನರು ನೂಕು ನುಗ್ಗಲು ಉಂಟಾಯಿತು,ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆಯಲು ನೆರೆದಿದ್ದ ಸಾರ್ವಜನಿಕರನ್ನು ಮಾತನಾಡಿಸಿದಾಗ

ನಾವುಗಳು ಸ್ವಯಂ ಪ್ರೇರಿತರಾಗಿ ಪಕ್ಷದ ಸಿದ್ಧಾಂತವನ್ನು ಮತ್ತು ಮಾನ್ಯ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಾಯಕತ್ವವನ್ನು ಮೆಚ್ಚಿ ನಾವು ಸದಸ್ಯತ್ವವನ್ನು ಪಡೆಯಲು ಬಂದಿದ್ದೇವೆ,
“ಕಾಂಗ್ರೆಸ್‌, ಪಕ್ಷಕ್ಕೆ ಯುವಕರೇ ಆಧಾರಸ್ತಂಭ. ಸುಭದ್ರ ರಾಷ್ಟ್ರ ಹಾಗೂ ಜಾತ್ಯತೀತ ಸಮಾಜ ಯುವಕರಿಂದ ಮಾತ್ರ ಸಾಧ್ಯ. 60 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ವಿಶ್ವದ ಅತಿದೊಡ್ಡ ಬಲಿಷ್ಠ ಸಂಘಟನೆಯಾಗಿದೆ. ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದೆ,’’ ಎಂದರು.

ಈ ಸಂದರ್ಭದಲ್ಲಿ ಎಐಸಿಸಿ ಸದಸ್ಯರು ಹಾಗೂ ಕೆಪಿಸಿಸಿ ಉಸ್ತುವಾರಿಗಳಾದ ಕವಿತಾರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ತಾಜ್ ಪೀರ್, ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಿಮುಲ್ಲಾ, ಕಾಂಗ್ರೆಸ್ ಪಕ್ಷದ ಮುಖಂಡರಾದ ಡಾಕ್ಟರ್ ಬಿ ಯೋಗೇಶ್ ಬಾಬು,ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟೇಲ್ ಜಿ ಪಾಪನಾಯಕ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿಪಿ ಸುರೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಕುಮಾರಸ್ವಾಮಿ, ಕರಿಬಸಮ್ಮ ಮತ್ತು ಊರಿನ ಮುಖಂಡರಾದ ಧನಂಜಯ್, ಕೆಓ ಪಾಪಣ್ಣ, ಹಾಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಬೋರಯ್ಯ, ಸ್ಥಳೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

-ನಂದೀಶ್ ನಾಯಕ.

LEAVE A REPLY

Please enter your comment!
Please enter your name here