ಹೊಸಪೇಟೆ(ವಿಜಯನಗರ)ಏ.13 : ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಹೊಸಪೇಟೆ ತಾಲೂಕಿನ ಕಲ್ಲಳ್ಳಿ ಗ್ರಾಮದಲ್ಲಿ ಇದೇ ಏ.16ರಂದು ಗ್ರಾಮವಾಸ್ತವ್ಯ ಮಾಡಲಿರುವ ಹಿನ್ನಲೆಯಲ್ಲಿ ತಾಲೂಕು ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ವಿಶ್ವಜಿತ ಮೆಹತ ಅವರ ಅಧ್ಯಕ್ಷತೆಯಲ್ಲಿ ಬುಧವಾರದಂದು ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ವಿಶ್ವಜಿತ ಮೆಹತ ಅವರು, ಗ್ರಾಮವಾಸ್ತವ್ಯಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನೀಡಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಹಾಗೂ ದಿನಕ್ಕೆ ಎರಡು ಬಾರಿ ಗ್ರಾಮಕ್ಕೆ ಭೇಟಿ ನೀಡಿ ಕೆಲಸಗಳನ್ನು ಪರಿಶೀಲಿಸಿ ಮಾಹಿತಿಯನ್ನು ತಹಶೀಲ್ದಾರ್ ಕಚೇರಿಗೆ ನೀಡಬೇಕು ಎಂದು ಹೇಳಿದರು.
ಯಾವುದಾದರು ತೊಂದರೆಗಳಿದ್ದಲ್ಲಿ ಸೂಕ್ತ ಕ್ರಮವಹಿಸಬೇಕು. ಗ್ರಾಮವಾಸ್ತವ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಶೀರಸ್ಥೆದಾರರು, ಆಡಳಿತಾಧಿಕಾರಿಗಳು, ಪಿ.ಡಿ.ಓಗಳು ಹಾಗೂ ಇತರರು ಇದ್ದರು.