ಡಾ.ಬಿ.ಅರ್.ಅಂಬೇಡ್ಕರ್ ಸರ್ವಜನಾಂಗದ ಅಭಿವೃದ್ಧಿ ಹರಿಕಾರ; ಎಂ.ಶಿವಲಿಂಗಪ್ಪ

0
128

ಸಂಡೂರು:26:-ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ನೆಲದ ಶೋಷಿತರ ಬಾಳಿನಲ್ಲಿ ಬೆಳಕನ್ನು ಚೆಲ್ಲಿದ ಮಹಾನ್ ಚೇತನ. ಅಂಬೇಡ್ಕರ್ ಅವರು ಸಂವಿಧಾನದಡಿಯಲ್ಲಿ ದಲಿತರಿಗಷ್ಟೇ ಅಲ್ಲದೇ ಜಾತಿ ಜನಸಂಖ್ಯಾವಾರು ಮೀಸಲಾತಿ ಕಲ್ಪಿಸಿ ಸರ್ವಜನಾಂಗದ ಅಭಿವೃದ್ಧಿಗಾಗಿ ಉತ್ತೇಜನ ನೀಡಿದ್ದಾರೆ. ದಲಿತ ಸಮುದಾಯದ ಹಿರಿಯರು ತಾಯಂದಿರು ತಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಬೇಕು ಯುವ ಸಮುದಾಯ ಶಿಕ್ಷಣವಂತರಾಗಿ ಸುಶಿಕ್ಷಿತ ಸಮುದಾಯ ನಿರ್ಮಿಸಲು ಕಂಕಣಬದ್ಧರಾಗಬೇಕೆಂದು ಡಾ. ಬಿ ಆರ್ ಅಂಬೇಡ್ಕರ್ ಸಂಘದ ತಾಲೂಕಾಧ್ಯಕ್ಷ ಎಂ. ಶಿವಲಿಂಗಪ್ಪ ಕರೆ ನೀಡಿದರು.ಅವರು ತಾಲೂಕಿನ ವಿಠಲಾಪುರ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಅವರದಲ್ಲಿ ಜರುಗಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 115ನೇ ಜಯಂತಿ ಕಾರ್ಯಕ್ರಮವನ್ನು ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು

ನಂತರ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಎನ್.ಸೋಮಪ್ಪ ಕುರೆಕುಪ್ಪ ಅವರು ಮಾತನಾಡಿ. ದಲಿತ ಜನಾಂಗದ ಬಂಧುಗಳು ವಿವಿಧ ಇಲಾಖೆಯಲ್ಲಿ ಸಿಗುವಂತಹ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು.ದಲಿತರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು,ಮುಂಬರುವ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರ ಅಭಿವೃದ್ಧಿಗಾಗಿ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು

ಸಮಾರಂಭದ ಅಧ್ಯಕ್ಷತೆಯನ್ನು ಡಾ.ಬಿ.ಅರ್.ಅಂಬೇಡ್ಕರ್ ಸಂಘ ಅಧ್ಯಕ್ಷ ಎಂ. ಶಿವಲಿಂಗಪ್ಪ, ಜೆಡಿಎಸ್ ತಾಲೂಕಾಧ್ಯಕ್ಷ ಎನ್ ಸೋಮಪ್ಪ, ಕೋಟಗಿನ ಹಾಳ್ ಮಲ್ಲಿಕಾರ್ಜುನ್, ಗ್ರಾ.ಪಂ. ಅಧ್ಯಕ್ಷೆ ಮಂಗಳಮ್ಮ ಸದಾಶಿವ, ಮಾಜಿ ಗ್ರಾಪಂ ಅಧ್ಯಕ್ಷೆ ಹೇಮಲತಾ ಚೌಡಪ್ಪ, ಮಾಜಿ ತಾಪಂ ಸದಸ್ಯೆ ಹೇಮಾವತಿ ಹೊನ್ನೂರಸ್ವಾಮಿ, ಪ್ರಭಾಕರ್, ಜೆ.ರಾಣಪ್ಪ,ಹೆಚ್. ಹನುಮಂತಪ್ಪ, ಇತರರು ಇದ್ದರು

LEAVE A REPLY

Please enter your comment!
Please enter your name here