ಕರ್ತವ್ಯಲೋಪ ಆರೋಪ: ಮೂವರು ಶಿಕ್ಷಕರು ಅಮಾನತು

0
157

ಕಲಬುರಗಿ:ಮೇ.14: ಕರ್ತವ್ಯಲೋಪ ಹಾಗೂ ಅವ್ಯವಹಾರ ಆರೋಪದಡಿ ಆಳಂದ ತಾಲೂಕಿನಲ್ಲಿ ಓರ್ವ ಶಿಕ್ಷಕಿ ಮತ್ತು ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಬಜಂತ್ರಿ ಆದೇಶ ಹೊರಡಿಸಿದ್ದಾರೆ.

ಆಳಂದ ತಾಲೂಕು ಅಂಬೆವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅಬ್ದುಲ್ ರಜಾಕ್, ಪ್ರಭಾರಿ ಮುಖ್ಯ ಶಿಕ್ಷಕ ಜಹೀರ್ ಅಬ್ಬಾಸ್ ಹಾಗೂ ಖಜೂರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೀರಮ್ಮ ಈ ಮೂರು ಜನರನ್ನ ಅಮಾನತ್ತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಖಜೂರಿಯ ಮುಖ್ಯ ಶಿಕ್ಷಕಿ ವೀರಮ್ಮ, ಸರ್ಕಾರದ ಮಹತ್ತರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ, ಇವರ ಮೇಲೆ ಕರ್ತವ್ಯ ನಿರ್ಲಕ್ಷ್ಯತೆ ಅಂಶಗಳ ಆಧಾರದ ಮೇರೆಗೆ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ವೀರಮ್ಮ ವಿರುದ್ಧ ‘ನಮ್ಮ ಕರುನಾಡು ರಕ್ಷಣಾ ವೇದಿಕೆ’ ಜಿಲ್ಲಾಧ್ಯಕ್ಷ ಗಂಗಾಧರ ಕುಂಬಾರ, ‘ಜಯ ಕರ್ನಾಟಕ ಜನಪರ ವೇದಿಕೆ’ ಜಿಲ್ಲಾಧ್ಯಕ್ಷ ಬಸವರಾಜ ಎಸ್‌. ಕೊರಳ್ಳಿ ನೀಡಿದ ದೂರಿನ ಹಿನ್ನೆಲೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಿಚಾರಣೆ ನಡೆಸಿ ಶಿಕ್ಷಣಾಧಿಕಾರಿಗೆ ಸಲ್ಲಿಸಿದ ವರದಿ ಅನ್ವಯ ವೀರಮ್ಮ ಅವರನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಅಂಬೇವಾಡ ಶಾಲೆಯ ಸಹ ಶಿಕ್ಷಕ ಅಬ್ದುಲ್‌ ರಜಾಕ್‌, ಪ್ರಭಾರಿ ಮುಖ್ಯ ಶಿಕ್ಷಕ ಜಹೀರ್‌ ಅಬ್ಬಾಸ್‌ ವಿರುದ್ಧ ಕರ್ತವ್ಯಲೋಪ ಆರೋಪ ಮಾಡಿ ಶಾಸಕ ಸುಭಾಷ್ ಗುತ್ತೇದಾರ್ ದೂರು ನೀಡಿದ್ದರು. ದೂರಿನನ್ವಯ ಶಿಕ್ಷಣ ಸಂಯೋಜಕರು, ಕ್ಷೇತ್ರ ಬಿಆರ್‌ಪಿ, ಸಿಆರ್‌ಪಿ ವರದಿ ನೀಡಿದ್ದರು. ವರದಿಗಳನ್ನು ಕ್ರೋಢೀಕರಿಸಿ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ್ ದೇಗುಲಮಡಿ, ಡಿಡಿಪಿಐ ಅವರಿಗೆ ತಮ್ಮ ವರದಿ ಸಲ್ಲಿಸಿದರು. ವರದಿಯನ್ವಯ ಇಬ್ಬರು ಶಿಕ್ಷಕರನ್ನು ಡಿಡಿಪಿಐ ಅಶೋಕ್ ಭಜಂತ್ರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here