ಕೊಟ್ಟೂರು::ಮೇ:19:- ಸ್ಥಳೀಯ ಪತಂಜಲಿ ಯೋಗ ಸಮಿತಿ, ಆಯುಷ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ನಿಮಿತ್ರ ಪಟ್ಟಣದ ಸಿಪಿಇಡಿ ಕಾಲೇಜು ಮೈದಾನದಲ್ಲಿ ಗುರುವಾರ ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.
ಹರಿಹರ ವಿರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಜಿ ಮಾತನಾಡಿ ಯೋಗ ಭಾರತ ವಿಶ್ವದ ಮಾದರಿ ವಿದ್ಯೆಯಾಗಿದೆ. ವಿಶ್ವಕ್ಕೆ ಭಾರತದ ಬಹುದೊಡ್ಡ ಕೊಡುಗೆ ಯೋಗ. ಯೋಗ, ಧ್ಯಾನ, ಪ್ರಾಣಾಯಾಮಗಳಿಂದ ಮನುಷ್ಯನ ಆರೋಗ್ಯ ಸುಧಾರಿಸುತ್ತದೆ ಎಂದರು. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎ.ನಸರುಲ್ಲಾ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವರದಿ: ಶಿವರಾಜ್ ಕನ್ನಡಿಗ