ಕ.ರಾ.ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ದಾನೇಶ್ ಆಯ್ಕೆ.

0
312

ಕೊಟ್ಟೂರು:ಮೇ:25:-ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಮಿತಿಯು, ರೈತ ಸಂಘದ ವಿಜಯನಗರ ಜಿಲ್ಲಾ ಘಟಕ ಅಧ್ಯಕ್ಷರಾಗಿ ದಾನೇಶ್ ರನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣದಲ್ಲಿ ಬುಧವಾರ ಕ.ರಾ.ರೈ.ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್.ಭರಮಣ್ಣ ಸುದ್ದಿಗಾರರೊಂದಿಗೆ ಮಾತನಾಡಿ ಸೋಮವಾರ ಹೊಸಪೇಟೆ ಎಪಿಎಂಸಿ ರೈತ ಭವನದಲ್ಲಿ ಜಿಲ್ಲಾ ಸಮಿತಿ ರಾಜ್ಯ ಕಾರ್ಯದ್ಯಕ್ಷರು ಸಿದ್ಧವೀರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಂಬಾನಿ ಶಿವಪ್ಪ ಸೇರಿದಂತೆ ವಿಜಯನಗರ ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಆಯ್ಕೆ ನಂತರ ರಾಜ್ಯಕಾರ್ಯದ್ಯಕ್ಷ ಸಿದ್ದವೀರಪ್ಪನವರು ರೈತ ಸಂಘದ ಸಿದ್ದಾಂತವನ್ನು, ರಾಜ್ಯ ಸಮಿತಿ ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳುವ ಮೂಲಕ ರೈತರ ಸಂಕಷ್ಟಕ್ಕೆ ನೆರವಾಗಬೇಕು ಹಾಗೂ ಸಂಘಕ್ಕೆ ಯಾವುದೇ ಚ್ಯುತಿ ಬರದಂತೆ ಕಾಪಾಡಿಕೊಳ್ಳುವ ಮೂಲಕ ಸಂಘದ ಶ್ರಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಸಂಘದ ವಿಜಯನಗರ ಜಿಲ್ಲಾ ಘಟಕ ನೂತನ ಅಧ್ಯಕ್ಷರಿಗೆ ಭೋದಿಸಲಾಯಿತು ಎಂದು ತಿಳಿಸಿದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here