ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮಲೆಕ್ಕಾಧಿಕಾರಿ

0
85

ತುಮಕೂರು: ವ್ಯಕ್ತಿಯೊಬ್ಬರಿಗೆ ಪೌತಿ ಖಾತೆ ಮಾಡಿಕೊಡಲು 5000 ರೂ ಲಂಚ ಪಡೆಯುವಾಗ ತುಮಕೂರು ಎಸಿಬಿ ಅಧಿಕಾರಿಗಳ ತಂಡ ಬೀಸಿದ ಬಲೆಗೆ ಗ್ರಾಮ ಲೆಕ್ಕಾಧಿಕಾರಿ ಸಿಕ್ಕಿಬಿದ್ದಿರುವ ಘಟನೆ ಹುಲಿಯೂರುದುರ್ಗ ದಲ್ಲಿ ನಡೆದಿದೆ.

ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಕೆಂಚನಹಳ್ಳಿ ಗ್ರಾಮ ಲೆಕ್ಕಾಧಿಕಾರಿ ನಂಜುಂಡಯ್ಯ ಎಂಬುವರು ತಮ್ಮ ಕಚೇರಿಯಲ್ಲಿ ಲಂಚದ ಹಣ ಪಡೆಯುವಾಗ ಇಂದು ಮಧ್ಯಾಹ್ನ ತುಮಕೂರು ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ ಚಿಕ್ಕಿ ನೇತೃತ್ವದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ನಂಜುಂಡಯ್ಯನವರನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here