ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ: ಕೊಟ್ಟೂರಿನ ಇಂದು ಪಿಯು ಕಾಲೇಜು

0
599

ಕೊಟ್ಟೂರು:ಜೂನ್:18:- ಪಟ್ಟಣದಲ್ಲಿ ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು
ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ಶ್ವೇತಾ ಭೀಮಾಶಂಕರ ಭೈರಗೊಂಡ, ಸಹನಾ ಮಡಿವಾಳರ ಈ ಇಬ್ಬರೂ ವಿದ್ಯಾಥಿಗಳು 600 ಅಂಕಗಳಿಗೆ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಇದೇ ಕಾಲೇಜಿನ ಜಿ ಮೌನೇಶ್ 593, ಸಮೀರ್ 591, ಶಾಂತಾ ಜಿ 591, ಕಾವೇರಿ ಜಗ್ಗಲ್ 591 ಅಂಕಗಳನ್ನು ಪಡೆದಿದ್ದಾರೆ.

ಕೊಟ್ಟೂರಿನ ಇಂದು ಪಿಯು ಸತತ 7 ವರ್ಷಗಳಿಂದ ರಾಜ್ಯಕ್ಕೆ ಮೊದಲ ಸ್ಥಾನ ಪಡೆಯುತ್ತ ಬಂದಿರುವುದು ಗಮನಾರ್ಹ.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here