ಕೊಟ್ಟೂರು:ಜುಲೈ:10:-ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಈದ್ ಉಲ್ ಅದಾ ಬಕ್ರೀದ್ ಹಬ್ಬವನ್ನು ಕೊಟ್ಟೂರು ತಾಲೂಕಿನಲ್ಲಿ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಸಂಭ್ರಮದಿಂದ ಆಚರಿಸಿದರು.
ಮುಂಜಾನೆ ಮಸೀದಿ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಸಾಮೂಹಿಕ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಪರಸ್ಪರ ಶುಭಕೋರುವುದರ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.
ಕೊರೋನಾ ಕಾರಣದಿಂದಾಗಿ ಸತತ ಎರಡು ವರ್ಷಗಳ ಕಾಲ ಸರಳವಾಗಿ ಹಬ್ಬದ ಆಚರಣೆ ನಡೆದಿದ್ದು ಈ ಬಾರಿ ಪುಟಾಣಿಗಳು, ಮಕ್ಕಳು, ಹಿರಿಯರು ವೃದ್ಧರು ಸೇರಿ ಪ್ರತಿಯೊಬ್ಬರು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಹಬ್ಬದ ಆಚರಣೆಗೆ ಅನುಕೂಲವಾಗುವಂತೆ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕೊಟ್ಟೂರು ಪೊಲೀಸ್ ಇಲಾಖೆಯುವ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿತ್ತು.