ಶಿವಮೊಗ್ಗ ಜುಲೈ 27:ಶಿವಮೊಗ್ಗ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರವಾಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ ಕಾಯ್ದೆ 2016ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜು.27 ರಂದು ನಗರದ ವಿನೋಬನಗರ ಮತ್ತು ಆಟೋಕಾಂಪ್ಲೇಕ್ಸ್ನಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಸಮಾಜಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಬಾಲಕಾರ್ಮಿಕ ತಪಾಸಣೆ ಮತ್ತು ಭಿಕ್ಷಟಾಣೆ ಮಾಡುವ ಮಕ್ಕಳ ತಪಾಸಣೆ ಹಮ್ಮಿಕೊಳ್ಳಲಾಯಿತು.
ತಪಾಸಣೆಯ ವೇಳೆ ಅಂಗಡಿ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ತಂಡದಲ್ಲಿ ಕಾರ್ಮಿಕ ನಿರೀಕ್ಷಕರಾದ ಭಿಮೇಶ್, ಯೋಜನಾ ನಿರ್ದೇಶಕರಾದ ರಘುನಾಥ ಎಸ್, ಇತೆರೆ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.