ಕಲಬುರಗಿ,ಆ.17:- ಬುಧವಾರ ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಬೆಳಿಗ್ಗೆ ವಾಯು ವಿಹಾರಕ್ಕೆ ಬಂದಿದ್ದ ಪಾದಚಾರಿಗಳ ಮೂಲಕ ಆವರಣದಲ್ಲಿ ವಿವಿಧ ಜಾತಿಯ 31 ಸಸಿ ನೆಡುವ ಮೂಲಕ ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಸಿತು. ನೆಟ್ಟ ಗಿಡಗಳ ಸಂರಕ್ಷಣೆ ಬಗ್ಗೆಯೂ ಕಾಳಜಿ ವಹಿಸುವಂತೆ ಪಾದಚಾರಿಗಳಿಗೆ ತಿಳಿಸಲಾಯಿತು.
ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಮತು ್ತ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ನ್ಯಾಯಾಂಗೇತರ ಸದಸ್ಯ ಶಿವಸೈಲಂ, ಕಲಬುರಗಿ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ವೆಂಕಟೇಸನ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಭಾವಿಕಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲಕುಮಾರ ಚವ್ಹಾಣ, ವಲಯ ಅರಣ್ಯಾಧಿಕಾರಿ ಸಚಿನ್ ಪಾಟೀಲ್, ಕಾಶೀನಾಥ್, ಅರಣ್ಯ ರಕ್ಷಕ ಹೈದರ್ ಅಲಿ ಮತ್ತಿತರ ಸಿಬ್ಬಂದಿ ವರ್ಗದವರು ಹಾಜರಿದ್ದರು.