ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ,ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ

0
109

ಬಳ್ಳಾರಿ,ಸೆ.12: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸೆ.17ರಂದು ನಗರದ ಕೊಳಗಲ್ ಏರ್‍ಸ್ಟ್ರೀಪ್ ಬಳಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆಯಂದೇ ಜಿಲ್ಲೆಯಲ್ಲಿ ಬೃಹತ್ ಯೋಗಾಥಾನ್ ಕಾರ್ಯಕ್ರಮವು ಆಯೋಜಿಸಲಾಗಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯೋಗ ತರಬೇತುದಾರರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಅವರು ಹೇಳಿದರು.
ಈ ಕುರಿತಂತೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು.
ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳ್ಳಾರಿಯಲ್ಲಿ ಬೃಹತ್ ಯೋಗಥಾನ್ ಕಾರ್ಯಕ್ರಮ:
ಜಿಲ್ಲೆಯಲ್ಲಿ ಸೆ.17ರಂದು ಬೃಹತ್ ಯೋಗಥಾನ್ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಯಶಸ್ವಿಯಾಗಿ ಜರುಗುವ ನಿಟ್ಟಿನಲ್ಲಿ ಸೆ.14ರಂದು ಪೂರ್ವಭ್ಯಾಸವನ್ನು ಕೈಗೊಳ್ಳಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರು ಮತ್ತು ವಸತಿ ನಿಲಯಗಳಲ್ಲಿ ಸಂಬಂಧಿಸಿದ ಯೋಗಪಟುಗಳು ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬೃಹತ್ ಯೋಗಾಥಾನ್ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಅವರು ಹೇಳಿದರು.

ಜಿಲ್ಲೆಯಲ್ಲಿ ಕಡ್ಡಾಯವಾಗಿ 20 ಸಾವಿರ ಜನರು ಈ ಯೋಗಾಥಾನ್‍ದಲ್ಲಿ ಪಾಲ್ಗೊಳ್ಳಬೇಕು; ಪಾಲ್ಗೊಳ್ಳುವವರು ಕಡ್ಡಾಯವಾಗಿ ನೋಂದಣಿಯಾಗಿರಬೇಕು;
ನೋಂದಣಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಶಾಲಾ-ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು ಅಗತ್ಯ ಕ್ರಮಕೈಗೊಳ್ಳಬೇಕು;ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ಉದಾಸೀನತೆ ಮಾಡುವಂತಿಲ್ಲ ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಯೋಗ ತರಬೇತಿ ಸಂಸ್ಥೆಗಳಿವೆ, ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಆಯುಷ್ ವೈದ್ಯಕೀಯ ವಿದ್ಯಾರ್ಥಿಗಳು, ಎನ್.ಎಸ್.ಎಸ್ ಸ್ವಯಂ ಸೇವಕರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿನ್ನೆಸ್ ಹಾಗೂ ವಿಶ್ವದಾಖಲೆ ನಿರ್ಮಾಣದ ಬೃಹತ್ ಕಾರ್ಯದಲ್ಲಿ ನಾವೆಲ್ಲ ಪಾಲುದಾರರಾಗಬೇಕು ಎಂದು ಮನವಿ ಮಾಡಿದರು.

ಪ್ರತಿ ಸಾವಿರ ಯೋಗಾಸಕ್ತರಿಗೆ ಒಂದು ಚೌಕ್;ಅದಕ್ಕೆ ಇಬ್ಬರು ತರಬೇತುದಾರರು: ಪ್ರತಿ 1 ಸಾವಿರ ಯೋಗಾಸಕ್ತರಿಗೆ ಒಂದು ಚೌಕ(ಬಾಕ್ಸ್‍ಗಳು)ಗಳನ್ನು ಗುರುತಿಸಲಾಗುತ್ತಿದ್ದು, ಪ್ರತಿ ಬಾಕ್ಸ್‍ಗೆ ಇಬ್ಬರು ಯೋಗ ತರಬೇತುದಾರರು ಇರಲಿದ್ದಾರೆ. ಅವರು ಬೃಹತ್ ಯೋಗಾಥಾನ್‍ಗಾಗಿ ಸಿದ್ದಪಡಿಸಿದ ನಿಯಮಾನುಸಾರ ಯೋಗಾಸನಗಳನ್ನು 45 ನಿಮಿಷಗಳ ಕಾಲ ತಿಳಿಸಿಕೊಡಲಿದ್ದಾರೆ;ಅದರಂತೆ ಯೋಗಾಸಕ್ತರು ಮಾಡಬೇಕು ಎಂದು ಅವರು ಹೇಳಿದರು.
20 ಸಾವಿರ ಯೋಗಾಸಕ್ತರಿಗೆ 20 ಬಾಕ್ಸ್‍ಗಳು ಹಾಗೂ ಯೋಗ ತರಬೇತಿ ನೀಡುವವರಿಗೆ ಚಿಕ್ಕದಾದ ವೇದಿಕೆ ನಿರ್ಮಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯೋಗಾಭ್ಯಾಸದ ದಿನಗಳು ಹಾಗೂ ಯೋಗಾಥಾನ್ ದಿನದಂದು ಸಾರಿಗೆ ವ್ಯವಸ್ಥೆ,ಆಹಾರ ವ್ಯವಸ್ಥೆ,ಭದ್ರತಾ ವ್ಯವಸ್ಥೆ, ಏರ್‍ಸ್ಟ್ರೀಪ್ ಸ್ವಚ್ಛತೆ, ಕುಡಿಯುವ ನೀರು ಮತ್ತಿತರರ ಸೌಲಭ್ಯಗಳು, ಸ್ವಯಂ ಸೇವಕರು ಮತ್ತಿತರ ಅಗತ್ಯಗಳ ಪೂರ್ವಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಪಲಾಟಿ ಅವರು ನೀಡಿದರು.

ಬಳ್ಳಾರಿ ಉಪವಿಭಾಗಾಧಿಕಾರಿ ಡಾ.ಆಕಾಶ ಶಂಕರ್ ಅವರು ಮಾತನಾಡಿ, ವಿವಿಧ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಕಲ್ಯಾಣ ಕರ್ನಾಟಕ ಉತ್ಸವ ಮತ್ತು ಬೃಹತ್ ಯೋಗಾಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರಿಗೆ ವ್ಯವಸ್ಥೆಯ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here