ಕೊಟ್ಟೂರು ತಾಲ್ಲೂಕು ತೂಲಹಳ್ಳಿಯಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಇಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆಯ ಅಂಗವಾಗಿ ತೂಲಹಳ್ಳಿ ಗ್ರಾಮದಲ್ಲಿ ರೈತ ಮೋರ್ಚಾದ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಹಳ್ಳಿಯಲ್ಲಿರುವ ಹಳೆಯ ಕಲ್ಯಾಣಿಯನ್ನು ಕಲ್ಯಾಣಿಯನ್ನು ಸ್ವಚ್ಛಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸೂರ್ಯ ಪಾಪಣ್ಣನವರ ದೀನದಯಾಳ್ ಉಪಾಧ್ಯಾಯ ಅವರ ಜೀವನಚರಿತ್ರೆಯನ್ನು ಸವಿಸ್ತಾರವಾಗಿ ತಿಳಿಸಿಕೊಟ್ಟರು ಮಂಡಲ ಅಧ್ಯಕ್ಷರಾದ ಕೆ. ಚನ್ನಪ್ಪ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಗೌಡ ರೈತ ಮೋರ್ಚಾ ಅಧ್ಯಕ್ಷ ಹಿರೇಹೆಗ್ಡಾಳ್ ರಾಜಣ್ಣ ರೈತ ಮೋರ್ಚಾ ಕಾರ್ಯದರ್ಶಿ ಮಾರೇಶ್ ಮತ್ತು ಸಂತೋಷ್ ಉಪಸ್ಥಿತರಿದ್ದರು.