ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಟರ್ಧೆಗೆ ಆಯ್ಕೆ: ಅಭಿನಂದನೆ

0
59

ಶಿವಮೊಗ್ಗ ಅಕ್ಟೋಬರ್ 07:ಅಕ್ಟೋಬರ್ 16 ರಿಂದ 18 ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ 61ನೇ ಓಪನ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆಯ 800 ಮೀ ಓಟದಲ್ಲಿ ಭಾಗವಹಿಸಲು ಶಿವಮೊಗ್ಗ ಜಿಲ್ಲೆಯ ಆಕಾಶ್ ಎಸ್ ಗೊಲ್ಲರ್ ಇವರು ಆಯ್ಕೆಯಾಗಿರುತ್ತಾರೆ.

ಆಕಾಶ್ ಎಸ್ ಗೊಲ್ಲರ್ ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆ ಇವರ ಬಳಿ ದೈನಂದಿನ ತರಬೇತಿ ಪಡೆಯುತ್ತಿದ್ದಾರೆ. ಈ ಕ್ರೀಡಾಪಟುಗೆ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ, ಶಿವಮೊಗ್ಗ ಹಾಗೂ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here