ಬಳ್ಳಾರಿ : ರಾಜ್ಯದ ವಿಸ್ಮಯವಾಣಿ ಪತ್ರಿಕೆಯ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವರದಿಗಾರರು ದೊಡ್ಡ ಬಸವರಾಜ್ ಬಡಗಿ ರವರನ್ನು “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ” ಸಂಘಟನೆಯ ಬಳ್ಳಾರಿ ಜಿಲ್ಲಾ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನರವರು ನೇಮಿಸಿದ್ದಾರೆ.
ದೊಡ್ಡ ಬಸವರಾಜ್ ಬಡಗಿ ಕಳೆದ
ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಪತ್ರಕರ್ತರಾಗಿ
ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ವಿಸ್ಮಯವಾಣಿ ಸೇರಿದಂತೆ ರಾಜ್ಯದ ಹಲವಾರು ಪತ್ರಿಕೆಗಳಿಗೆ
ವರದಿಗಳು ಕೊಡುತ್ತಾ ಇದ್ದರು ಮತ್ತು ವಿಸ್ಮಯವಾಣಿ ಪತ್ರಿಕೆಯ ವರದಿಗಾರರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ.
ಕಳೆದ ವರ್ಷಗಳಿಂದ ತಮ್ಮದೇ
ಸಮಾಜ ಸೇವೆ ಕ್ಷೇತ್ರದಲ್ಲಿ ಮತ್ತು ದಲಿತ ಸಂಘದ ದಲಿತಪರ ಗ್ರಾಮದ ಹಳ್ಳಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಸಲುವಾಗಿ ಹೊರಾಟ ಮಾಡಿದ್ದಾರೆ. ಅವರ ಪರಿಣಾಮಕಾರಿ ವರದಿಗಳು
ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಎಂಟು ತಿಂಗಳ ಹಿಂದೆ “ಡಾ!! ಬಿ.ಆರ್. ಅಂಬೇಡ್ಕರ್ ದಲಿತ ಸಂಘ” ವನ್ನು ಸ್ಥಾಪಿಸಿ
ಸಾಕಷ್ಟು ಜನಪ್ರಿಯ ಕಾರ್ಯಕ್ರಮಗಳನ್ನು
ಸಂಘಟಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಮನಮುಟ್ಟುವಲ್ಲಿ
ಸಫಲರಾಗಿದ್ದಾರೆ. ಇವರ ಅಮೂಲಾಗ್ರ ಸಂಘಟನಾತ್ಮಕ ಸೇವೆಯನ್ನು ಗಮನಿಸಿ “ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ ವಾಯ್ಸ್ ಸಂಘಟನೆಯ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ನೇಮಕಮಾಡಿದ್ದಾರೆ. ತಮ್ಮ ಅವಧಿಯಲ್ಲಿ ಪತ್ರಕರ್ತರರನ್ನು ಸಂಘಟಿಸುವುದರ ಜೊತೆಯಲ್ಲಿ ಅವರ ಮೂಲಭೂತ ಹಕ್ಕುಗಳು ಹಾಗೂ ಅವರು ಕಾರ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಸೂಚಿಸಿದ್ದಾರೆ.