ಹೈ ಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮರಿಂದ ಮೋಹನ್ ಕುಮಾರ್ ದಾನಪ್ಪಗೆ ಪ್ರಶಂಶೆ!

0
1008

ಬೆಂಗಳೂರು: ಅ 19, ರಾಜ್ಯದಲ್ಲಿ ಸಾಮಾಜಿಕ ಕಾಳಜಿಗೆ ಸಮಾಜದ ಪ್ರಮುಖ ಸಮಸ್ಯೆಗಳ ಬಗ್ಗೆ ಮ್ಯಾರಥಾನ್ ಓಟ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿರುವ ಕರ್ನಾಟಕ ಹೈ ಕೋರ್ಟ್ ನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕರ್ನಾಟಕ ಹೈ ಕೋರ್ಟ್ ನ ಅಡಿಷನಲ್ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ವಕೀಲರಾದ ಅರುಣ್ ಶ್ಯಾಮ್ ರವರು ಮೆಚ್ಚುಗೆ ವ್ಯಕ್ತ ಪಡಿಸಿ ಪ್ರಶಂಸಿಸಿದರು!

ಬದಲಾದ ಕಾಲದಲ್ಲಿ ಸಮಾಜದ ಹಲವಾರು ಸಮಸ್ಯೆಗಳ ಬಗ್ಗೆ ಜನಸಾಮಾನ್ಯರಲ್ಲಿ ಸಂದೇಶವನ್ನು ನೀಡುವ ಉದ್ದೇಶದಿಂದ ಸಾಮಾಜಿಕ ಜಾಗೃತಿ ಅಭಿಯಾನಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು ಕರ್ನಾಟಕ ರಾಜ್ಯದಲ್ಲಿ 21 ಕಿಲೋಮೀಟರ್ ಉದ್ದದ ಮ್ಯಾರಥಾನ್ ಗಳನ್ನೂ 3 ಬಾರಿ ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಿರಂತರವಾಗಿ ನವದೆಹಲಿಯಲ್ಲಿ ಮೂರುವರೆ ಗಂಟೆಗಳ ಕಾಲ ಮ್ಯಾರಥಾನ್ ಓಟ ನಡೆಸಿರುವ ಮೋಹನ್ ಕುಮಾರ್ ದಾನಪ್ಪನವರ ಕಾರ್ಯ ಅಭಿನಂದನೀಯ ಅವರ ಈ ಸಾಧನೆಯು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದಿದೆ ಎಂದು ತಿಳಿಸಲು ಹರ್ಷ ವ್ಯಕ್ತಪಡಿಸಿದ್ದೇನೆ,
ನಮ್ಮವರೊಬ್ಬರು ಈ ಸಾಧನೆ ಮಾಡಿರುವುದು ರಾಜ್ಯದ ವಕೀಲ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ,

ಮೋಹನ್ ಕುಮಾರ್ ದಾನಪ್ಪ ಅವರು ಉತ್ತಮ ಕೆಲಸವನ್ನು ಮುಂದುವರೆಸುತ್ತಾರೆಂದು ನಂಬಿರುವ ನಾನು ಅವರ ಮುಂದಿನ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಹಾರೈಸಿ ಪ್ರಶಂಸಿಸಿರುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here