ವಿಜಯನಗರ ಜಿಲ್ಲೆಯಾದ್ಯಂತ ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ; ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್

0
57

ಹೊಸಪೇಟೆ(ವಿಜಯನಗರ),ಅ.27: ಕನ್ನಡ ರಾಜ್ಯೋತ್ಸವವನ್ನು ವಿಜಯನಗರ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು (ಅ.27) ವಿಜಯನಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ರಾಜ್ಯೋತ್ಸವ ಆಚರಣಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತ್ಯೇಕ ವಿಜಯನಗರ ಜಿಲ್ಲೆಯಾದ ನಂತರ ಇದು ಸೇರಿ ಎರಡನೇ ವರ್ಷ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯು ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ಸಿದ್ದತೆ ಕೈಗೊಳ್ಳಲಾಗಿದೆ. ನವಂಬರ್ 1ರಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರೆವೇರಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಲಿದ್ದು ನಂತರ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರೆವೇರಿಸಿ ರಾಜ್ಯೋತ್ಸವ ಸಂದೇಶ ನೀಡುವರು. ನಂತರ ವಿವಿಧ ಶಾಲಾ, ಕಾಲೇಜು ಹಾಗೂ ಪೊಲೀಸ್ ಇಲಾಖೆ ಮತ್ತು ಆಶಾ, ಅಂಗನವಾಡಿ, ಎನ್.ಸಿ.ಸಿ.ಸ್ಕೌಟ್ಸ್ ಮತ್ತು ಗೈಡ್ಸ್, ಪೌರಕಾರ್ಮಿಕರಿಂದ ಆಕರ್ಷಕ ಪಥಸಂಚಲನ ನಡೆಸಲಿದ್ದು ಗೌರವ ವಂದನೆ ಸ್ವೀಕರಿಸುವರು.
ಹಂಪಿಯಿಂದ ಕನ್ನಡ ಜ್ಯೋತಿ; ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಗ್ಗೆ ಹಂಪಿ ವೀರುಪಾಕ್ಷೇಶ್ವರ ದೇವಸ್ಥಾನದಿಂದ ಪೂಜೆಯೊಂದಿಗೆ ಜ್ಯೋತಿ ಹೊರಟು ಬೆಳಗ್ಗೆ 8.30 ಕ್ಕೆ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದೆ. ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಹಾಗೂ ಸೂಕ್ತ ಬಂದೂಬಸ್ತ್‍ನ್ನು ಪೊಲೀಸ್ ಇಲಾಖೆಯಿಂದ ಕೈಗೊಳ್ಳಲಿದ್ದು ವಾಹನದ ವ್ಯವಸ್ಥೆ ಸಾರಿಗೆ ಇಲಾಖೆಯಿಂದ ಕೈಗೊಳ್ಳಲು ತಿಳಿಸಿದರು.
ಸಾಧಕ ಸಾಹಿತಿಗಳಿಗೆ ಸನ್ಮಾನ ಮತ್ತು ಕನ್ನಡ ಪುಸ್ತಕ ಮಾರಾಟ ಮಳಿಗೆ; ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಮತ್ತು ಕವಿತೆಗಳು, ಕಥೆ, ಕಾದಂಬರಿಯನ್ನು ರಚಿಸಿದ ಸಾಹಿತಿಗಳಿಗೆ ಸನ್ಮಾನಿಸಲಾಗುತ್ತದೆ. ಮತ್ತು ಕನ್ನಡ ಪುಸ್ತಕ ಮಾರಾಟಕ್ಕೆ ಗಾಂಧಿಚೌಕ್ ಬಳಿ ಮಾರಾಟ ಮಳಿಗೆಯನ್ನು ಸ್ಥಾಪನೆಗೆ ಅವಕಾಶ ಕಲ್ಪಿಸಲಾಗುತ್ತದೆ. ಮತ್ತು ರಾಜ್ಯೋತ್ಸವದ ಅಂಗವಾಗಿ ಒಂದು ವಾರ ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಮಾಡಲು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ; ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಕನ್ನಡ ನಾಡು, ನುಡಿ ಹಾಗೂ ಸಂಸ್ಕøತಿ ಕುರಿತಂತೆ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವಸತಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ವಿವಿಧ ಶಾಲಾ ಮಕ್ಕಳಿಂದ ಏರ್ಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕ್ರಮ ಕೈಗೊಳ್ಳಲು ಉಪನಿರ್ದೇಶಕರಿಗೆ ತಿಳಿಸಿ ಶಾಲಾ ಮಕ್ಕಳಿಗೆ ರಾಜ್ಯೋತ್ಸವದ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲು ಸೂಚಿಸಿದರು.
ಐದು ಕೋಟಿಯಲ್ಲಿ ರಂಗಮಂದಿರ; ವಿಜಯನಗರ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ನಿಗಧಿತ ಸ್ಥಳದ ಕೊರತೆಯಿದ್ದು ಇದಕ್ಕೆ ಪ್ರತ್ಯೇಕ ಸ್ಥಳ ನೀಡಲು ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ವೇಳೆ ಜಿಲ್ಲಾಧಿಕಾರಿಯವರು ಐದು ಕೋಟಿಯಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಇದÀಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದಿಂದ ಎರಡು ಕೋಟಿ ಮತ್ತು ಖನಿಜ ಪ್ರತಿಷ್ಠಾನ ನಿಧಿಯಿಂದ 3 ಕೋಟಿಯನ್ನು ಮೀಸಲಿರಿಸಿದ್ದು ನಿರ್ಮಾಣ ನಂತರ ಮುಂದಿನ ದಿನಗಳಲ್ಲಿ ಎಲ್ಲಾ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಇಲ್ಲಿ ಅವಕಾಶವಾಗಲಿದೆ. ಕನ್ನಡಾಸಕ್ತಸಂಘ, ಸಂಸ್ಥೆಗಳಿಗೂ ಒಂದು ಸ್ಥಳವನ್ನು ನಿಗಧಿ ಮಾಡಿಕೊಡಲಾಗುತ್ತದೆ ಎಂದರು.
ಕನ್ನಡದಲ್ಲಿರಲಿ ನಾಮಫಲಕ; ಸಂಘ, ಸಂಸ್ಥೆಗಳು ಸೇರಿದಂತೆ ಅಂಗಡಿ ಮುಂಗಟ್ಟುಗಳು ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಹೆಸರನ್ನು ಕನ್ನಡದಲ್ಲಿರುವುದು ಕಡ್ಡಾಯವಾಗಿರುತ್ತದೆ. ಇದನ್ನು ಉಲ್ಲಂಘನೆ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು.
ವೇದಿಕೆ ಸಿದ್ದತೆ ಸೇರಿದಂತೆ ವಿವಿಧ ಸಿದ್ದತೆಗಳನ್ನು ಕೈಗೊಳ್ಳಲು ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿ ಎಲ್ಲರೂ ರಾಜ್ಯೋತ್ಸವದಲ್ಲಿ ಭಾಗವಹಿಸಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಕನ್ನಡಪರ ಸಂಘಟನೆಗಳು ಮತ್ತು ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾರಕ್ಷಣಾಧಿಕಾರಿ ಡಾ.ಕೆ.ಅರುಣ್, ಸಹಾಯಕಆಯುಕ್ತ ಸಿದ್ದರಾಮೇಶ್ವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯನಗರ: ಕೋಟಿಕಂಠ ಗಾಯನ ಕಾರ್ಯಕ್ರಮ ಅ.28ರಂದು

ಹೊಸಪೇಟೆ(ವಿಜಯನಗರ),ಅ.27: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನನ್ನ ನಾಡು, ನನ್ನ ಹಾಡು ಎಂಬ ಶೀರ್ಷಿಕೆಯಡಿ ಕೋಟಿಕಂಠ ಗಾಯನ ಕಾರ್ಯಕ್ರಮ ಅ.28ರಂದು ಬೆಳಗ್ಗೆ 11ಕ್ಕೆ ಹಂಪಿಯ ಎದುರು ಬಸವಣ್ಣ ವೇದಿಕೆಯ ಆವರಣದಲ್ಲಿ ಆಯೋಜಿಸಲಾಗಿದೆ.
ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ ಜೊಲ್ಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ.ಕೆ.ಸುನೀಲಕುಮಾರ ಅವರು ಘನಉಪಸ್ಥಿತಿ ಇರುತ್ತದೆ. ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್‍ಸಿಂಗ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ವೈ.ದೇವೆಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಎನ್.ವೈ ಗೋಪಾಲಕೃಷ್ಣ, ಭೀಮನಾಯ್ಕ ಎಲ್.ಬಿ.ಪಿ, ಜಿ.ಕರುಣಾಕರರೆಡ್ಡಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕಮಲಾಪುರ ಸಭೆಯ ಸೈಯದ್ ಅಮಾನುಲ್ಲಾ, ಹಂಪಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಹಂಪಮ್ಮ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುವೆಂಪು ರಚಿತ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಹುಯಿಲಗೋಳ ನಾರಾಯಣರಾಯರ ರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸಿ ಕನ್ನಡ ಡಿಂಡಿಮವ, ಡಾ.ಡಿ.ಎಸ್.ಕರ್ಕಿರಚಿತ ಹಚ್ಚೇವು ಕನ್ನಡದ ದೀಪ, ಚನ್ನವೀರಕಣವೀರ ರಚಿತ ವಿಶ್ವ ವಿನೂತನ ವಿದ್ಯಾಚೇತನ, ಹಂಸಲೇಖ ರಚಿತ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ 6 ಸಮೂಹ ಗೀತ ಗಾಯನಗಳು ಹಾಡಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಅನಿರುದ್ಧ್‍ಪಿ.ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಪಂ ಸಿಇಒ ಬೋಯರ್ ಹರ್ಷಲ್ ನಾರಾಯಣ್‍ರಾವ್ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ.

ವಿಜಯನಗರ: ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ

ಹೊಸಪೇಟೆ(ವಿಜಯನಗರ),ಅ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಗಳು ಅ.29 ಮತ್ತು ಅ.30ರಂದು ಬೆಳಗ್ಗೆ 09.30ಕ್ಕೆ ಟಿಬಿ ಡ್ಯಾಂ ರಸ್ತೆಯ ಕೇಂದ್ರಿಯ ವಿದ್ಯಾಲಯದಲ್ಲಿ ನಡೆಯಲಿವೆ.
ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರು ಧ್ವಜಾರೋಹಣಾ ಮಾಡಿ ಕ್ರೀಡೆಗಳಿಗೆ ಚಾಲನೆ ನೀಡುವರು.
ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್‍ಸಿಂಗ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರಾದ ವೈ.ದೇವೆಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಎನ್.ವೈ ಗೋಪಾಲಕೃಷ್ಣ, ಭೀಮನಾಯ್ಕ ಎಲ್.ಬಿ.ಪಿ, ಜಿ.ಕರುಣಾಕರ ರೆಡ್ಡಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷರಾದ ಸುಂಕಮ್ಮ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಅನಿರುದ್ಧ್‍ಪಿ.ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಪಂ ಸಿಇಒ ಬೋಯರ್ ಹರ್ಷಲ್ ನಾರಾಯಣ್‍ರಾವ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಜಿ.ಕೋಟ್ರೇಶ್, ಪ್ರಭಾರಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ.ಬಿ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here