ಕೊಟ್ಟೂರು: ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ (ಬಣ) ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಪಟ್ಟಣದ ಅದ್ಧೂರಿಯಾಗಿ ಆಚರಿಸಲಾಯಿತು.
ರಾಜ್ಯೋತ್ಸವದ ಅಂಗವಾಗಿ ಉಜ್ಜಿನಿ ಸರ್ಕಲ್ ವೃತ್ತದಲ್ಲಿ ತಾಯಿ ಭುವನೇಶ್ವರಿ ದೇವಿಯ ಬೃಹತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾ ರೋಹಣ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಕರವೇ ಕೊಟ್ಟೂರು ತಾಲೂಕು ಅಧ್ಯಕ್ಷರು ಕೆ. ಮಂಜುನಾಥ್, ನಗರ ಘಟಕ ಅಧ್ಯಕ್ಷರು ಶಿವಕುಮಾರ್ ಗೌಡ, ಖಜಂಚಿ. ಕೊಟ್ರೇಶ್ ( ವಿಷ್ಣು) ನಾಗರಾಜ್ , ಯುವರಾಜ್, ಹಾಗೂ ಗುರುಬಸವರಾಜ್, ಪದಾಧಿಕಾರಿಗಳು ಸದಸ್ಯರು ಇದ್ದರು