ಕೊಟ್ಟೂರು : ಇಂದು ನಡೆದ ವಿಜಯನಗರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕೊಟ್ಟೂರೇಶ್ವರ ಕಾಲೇಜಿನ ವಿದ್ಯಾರ್ಥಿ ಕೋವಿ ಕೊಟ್ರೇಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜು ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ ಹಾಗೂ ಕೊಟ್ಟೂರೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊಫೆಸರ್ ಶಾಂತ ಮೂರ್ತಿ ಬಿ ಕುಲಕರಣಿ ಮತ್ತು ಪದವಿ ಪೂರ್ವ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಬಸವರಾಜ ಬಣಕಾರ, ಡಾಕ್ಟರ್ ಶಿವಕುಮಾರ ಮತ್ತು ಆಡಳಿತ ಮಂಡಳಿಯ ಸರ್ವ ಸದಸ್ಯರುಗಳು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ: ಶಿವರಾಜ್ ಕನ್ನಡಿಗ