ಉಡುಪಿ, ಡಿಸೆಂಬರ್ 9: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವು ಡಿಸೆಂಬರ್ 14 ಮತ್ತು 15 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಡಿ. 14 ರಂದು ಬೆಳಗ್ಗೆ 9 ಘಂಟೆಗೆ ಕ್ರೀಡಾಕೂಟ ಆರಂಭವಾಗಲಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಸರಕಾರಿ ನೌಕರರು ನಿಗಧಿತ ನಮೂನೆಯಲ್ಲಿ ಮಾಹಿತಿಯನ್ನು ಡಿ. 12 ರ ಒಳಗೆ hಣಣಠಿs://ಜಿoಡಿms.gಟe/6sxಜಿiಕಿಜಿ7gಠಿ1ಉ5mei9 ಗೆ ಸಲ್ಲಿಸಬಹುದಾಗಿದೆ.
ನೌಕರರಿಗೆ ಅಥ್ಲೆಟಿಕ್ಸ್, ಗುಂಪು ಸ್ಪರ್ಧೆ, ಸಾಂಸ್ಕೃತಿಕ ಹಾಗೂ ಇತ್ಯಾದಿ ಕ್ರೀಡೆಗಳು ನಡೆಯಲಿದ್ದು, ಒಂದು ಸ್ಪರ್ಧೆಯಲ್ಲಿ ಐದಕ್ಕಿಂತ ಕಡಿಮೆ ಸ್ಪರ್ಧಾಳುಗಳಿದ್ದಲ್ಲಿ ಅಂತಹ ಸ್ಪರ್ಧೆಗೆ ರಾಜ್ಯ ಮಟ್ಟಕ್ಕೆ ನೇರವಾಗಿ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳ ಕಚೇರಿ ಅಥವಾ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಧಕ ಶಾಲೆ ; ಸಾಧಕ ಶಿಕ್ಷಕ ಪ್ರಶಸ್ತಿ
ಉಡುಪಿ, ಡಿಸೆಂಬರ್ 9 : ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿರುವ ಶಾಲೆ, ಕಾಲೇಜುಗಳನ್ನು ಗುರುತಿಸಿ, ಗೌರವಿಸುವ ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಪರ್ಯಾಯ ಮಠಾಧೀಶರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಸಾಧಕ ಶಾಲೆ ಪ್ರಶಸ್ತಿ- ಪದವಿಪೂರ್ವ ಕಾಲೇಜು ವಿಭಾಗ
ಕಲಾ ವಿಭಾಗದಲ್ಲಿ ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು (ಚಿನ್ನ) ಹಾಗೂ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು (ಬೆಳ್ಳಿ), ವಾಣಿಜ್ಯ ವಿಭಾಗದಲ್ಲಿ ಕೊಕ್ಕರ್ಣೆ ಸರಕಾರಿ ಪದವಿ ಪೂರ್ವ ಕಾಲೇಜು (ಚಿನ್ನ) ಹಾಗೂ ಕರ್ಜೆ ಸರಕಾರಿ ಪದವಿ ಪೂರ್ವ ಕಾಲೇಜು (ಬೆಳ್ಳಿ) ಮತ್ತು ವಿಜ್ಞಾನ ವಿಭಾಗದಲ್ಲಿ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು (ಚಿನ್ನ) ಹಾಗೂ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೆಳ್ಳಿ) ಆಯ್ಕೆಯಾಗಿರುತ್ತದೆ.
ಪ್ರೌಢಶಾಲಾ ವಿಭಾಗ: ಸರಕಾರಿ ಶಾಲೆ ವಿಭಾಗದಲ್ಲಿ ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು-ಪ್ರೌಢಶಾಲಾ ವಿಭಾಗ (ಚಿನ್ನ) ಹಾಗೂ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು-ಪ್ರೌಢಶಾಲಾ ವಿಭಾಗ (ಬೆಳ್ಳಿ), ಅನುದಾನಿತ ಶಾಲೆಗಳಾದ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆ (ಚಿನ್ನ) ಹಾಗೂ ಚೇರ್ಕಾಡಿಯ ಶಾರದ ಪ್ರೌಢಶಾಲೆ (ಬೆಳ್ಳಿ) ಮತ್ತು ಅನುದಾನ ರಹಿತ ಶಾಲೆಗಳಾದ ಕಲ್ಯಾಣಪುರದ ಮಿಲಾಗ್ರೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ (ಚಿನ್ನ) ಹಾಗೂ ಮಲ್ಪೆಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ (ಬೆಳ್ಳಿ) ಆಯ್ಕೆಯಾಗಿರುತ್ತದೆ.
ಸಾಧಕ ಶಿಕ್ಷಕ ಪ್ರಶಸ್ತಿ- ಪ್ರೌಢಶಾಲಾ ವಿಭಾಗ: ಕನ್ನಡ ಮಾಧ್ಯಮ ವಿಭಾಗದಲ್ಲಿ ಚೇರ್ಕಾಡಿ ಶಾರದ ಪ್ರೌಢಶಾಲೆಯ ಶಾಲಿನಿ ಸಿ ಶೆಟ್ಟಿ (ಕನ್ನಡ), ರಮೇಶ್ ಶೆಟ್ಟಿ (ಹಿಂದಿ) ಹಾಗೂ ರೇವತಿ ಎಸ್. ಉಪ್ಪೂರ್ (ಸಮಾಜ ವಿಜ್ಞಾನ), ಉಡುಪಿ ನಿಟ್ಟೂರು ಪ್ರೌಢಶಾಲೆಯ ಹೆಚ್.ಎನ್. ಶೃಂಗೇಶ್ವರ (ಸಂಸ್ಕೃತ), ಕಲ್ಯಾಣಪುರ ಮಿಲಾಗ್ರೀಸ್ ಪ್ರೌಢಶಾಲೆಯ ರಿಚ್ಚಾರ್ಡ್ ಸಲ್ಡಾನ್ಹಾ (ಇಂಗ್ಲೀಷ್), ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಪ್ರೌಢಶಾಲೆಯ ಲೊಲಿಫಾ ಲಿಝಿ ನೊರೋನ್ಹಾ (ಗಣಿತ), ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಕಿರಣ ಕಾಮತ್ ಹಾಗೂ ಜ್ಯೋತಿ (ವಿಜ್ಞಾನ).
ಇಂಗ್ಲೀಷ್ ಮಾಧ್ಯಮ ವಿಭಾಗದಲ್ಲಿ ಉಡುಪಿ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಜಯಮಾಲಾ ನಾಯ್ಕ (ಕನ್ನಡ), ಸುನೀತಾ (ಸಂಸ್ಕೃತ), ಶುಭಾ ಆಚಾರ್ಯ (ಗಣಿತ), ರಜನಿ ಉಡುಪ ಮತ್ತು ದೀಪಾ ಜಿ.ಟಿ (ವಿಜ್ಞಾನ) ಹಾಗೂ ಎಮ್. ಪ್ರೀತಿ (ಸಮಾಜ ವಿಜ್ಞಾನ), ಕಲ್ಯಾಣಪುರ ಮಿಲಾಗ್ರೀಸ್ ಪ್ರೌಢಶಾಲೆಯ ಪ್ರಶಾಂತ್ ಲೋಪೆಜ್ (ಇಂಗ್ಲೀಷ್), ಕಲ್ಯಾಣಪುರ ಮೌಂಟ್ ರೋಸರಿ ಇಂಗ್ಲಿಷ್ ಪ್ರೌಢಶಾಲೆಯ ಮೀನಾ ಫೆರ್ನಾಂಡಿಸ್ (ಹಿಂದಿ), ದೈಹಿಕ ಶಿಕ್ಷಣ ವಿಭಾಗದಲ್ಲಿ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ದ ಜಗದೀಶ ಕೆ ಇವರನ್ನು ಆಯ್ಕೆ ಮಾಡಲಾಗಿರುತ್ತದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕರ ಆಯ್ಕೆಯನ್ನು ನಡೆಸಿದ್ದು, ಉತ್ತಮ ಫಲಿತಾಂಶದೊಡನೆ, ಫಲಿತಾಂಶದ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಈ ಆಯ್ಕೆಯನ್ನು ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಡಿ. 15 ರಂದು ಉದ್ಯೋಗ ಮೇಳ
ಉಡುಪಿ, ಡಿಸೆಂಬರ್ 9: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ
ಉಡುಪಿ, ಡಿಸೆಂಬರ್ 9 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಕೊಚ್ಚಿನ್ ಶಿಫ್ಯಾರ್ಡ್ ಲಿಮಿಟೆಡ್, ಮಲ್ಪೆಯ ಸಿಬ್ಬಂದಿಗಳಿಗೆ ಡಿಸೆಂಬರ್ 5 ರಿಂದ 7 ರ ವರೆಗೆ ಪ್ರಥಮ ಚಿಕಿತ್ಸಾ ತರಬೇತಿ ನಡೆಯಿತು.
ಪ್ರಥಮ ಚಿಕಿತ್ಸಾ ತರಬೇತುದಾರ ಡಾ. ಸುರೇಶ್ ಶೆಣೈ ಹಾಗೂ ಡಾ. ಕೀರ್ತಿರವರು ಅಪಘಾತಕ್ಕೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡುವ ವಿಧಾನ, ರಕ್ತಸ್ರಾವವನ್ನು ತಡೆಗಟ್ಟುವ ಕುರಿತು, ಬ್ಯಾಂಡೇಜ್ ಮಾಡುವ ವಿಧಾನ, ಸಿಪಿಆರ್ ಮಾಡುವ ವಿಧಾನ, ಹಾವು ಕಡಿತ, ವಿಷ ಸೇವನೆ, ಉಸಿರುಗಟ್ಟಿಸುವಿಕೆ, ಮುಳುಗುವಿಕೆ ಮುಂತಾದ ಸಂದರ್ಭಗಳಲ್ಲಿ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಪ್ರಾಯೋಗಿಕ ಪ್ರದರ್ಶನಗಳ ಮೂಲಕ ತರಬೇತಿ ನೀಡಿದರು.
ಸಮಾರೋಪ ಕಾರ್ಯಕ್ರಮದಲ್ಲಿ ಉಡುಪಿ ಕೊಚ್ಚಿನ್ ಶಿಫ್ಯಾರ್ಡ್ ಲಿಮಿಟೆಡ್, ಮಲ್ಪೆಯ ಸಿ.ಇ.ಓ ಹರಿಕುಮಾರ್ ಹಾಗೂ ಡೆಪ್ಯೂಟಿ ಜನರಲ್ ಮೆನೇಜರ್ ಅಂಬಾಲವನನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಕೊಚ್ಚಿನ್ ಶಿಫ್ಯಾರ್ಡ್ ಲಿಮಿಟೆಡ್ನ 25 ಸಿಬ್ಬಂದಿಗಳಿಗೆ ತರಬೇತಿ ನೀಡಲಾಯಿತು.
ಡಿ. 13 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ, ಡಿಸೆಂಬರ್ 9 : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 13 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿAದ ಹೊರಡುವ 11ಕೆವಿ ಫೀಡರ್ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ಸಫ್ಲೆ ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್,ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು,ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110/11ಕೆವಿ ಪರಿವರ್ತಕದ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ, ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರ ಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಮಾಬುಕಳ, ಹೊನ್ನಾಳ, ಹೇರೂರು, ಚೇರ್ಕಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ, ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ,ಹೊನ್ನಾಳ, ಕುಕ್ಕುಡೆ, ರುಡ್ಸೆಟ್, ಬಿ.ಸಿ ರೋಡ್, ಬೈಕಾಡಿ, ಚಾಂತಾರು, ಶಿವಾಜಿನಗರ, ಭದ್ರಗಿರಿ, ಹೇರೂರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11ಕೆವಿ ಶಿರ್ವ ಎಂ.ಯು.ಎಸ್.ಎಸ್ನ 33 ಕೆವಿ ಮಾರ್ಗದಲ್ಲಿ ಟವರ್ ಅಳವಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರರಿಂದ, ಬಂಟಕಲ್ಲು ಗ್ರಾಮ, ಪೊಲಿಪು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಹಾಗೂ ಶಂಕರಪುರ ಗ್ರಾಮ, ಕುರ್ಕಾಲು ಗ್ರಾಮ, ಇನ್ನಂಜೆ ಗ್ರಾಮ, ಕಳತ್ತೂರು ಗ್ರಾಮ (ಪುಂಚಲಕಾಡು), ಪಣಿಯೂರು ಗ್ರಾಮ, ಬಡಾ ಗ್ರಾಮ (ಉಚ್ಚಿಲ), ಮೂಳೂರು ಗ್ರಾಮ, ಬೆಳಪು ಗ್ರಾಮ, ಮಲ್ಲಾರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಂಬ0ಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.