ಬಳ್ಳಾರಿ,ಜ.18 : “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಅಭಿಯಾನದಡಿ ಪ್ರತಿ ತಿಂಗಳು 3ನೇ ಶನಿವಾರದಂದು ಗ್ರಾಮ ವಾಸ್ತ್ಯವ್ಯ ಮಾಡಲಾಗುತ್ತದೆ.
ಬಳ್ಳಾರಿ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಜ.27ರಂದು ಸಂಡೂರು ತಾಲೂಕಿನ ಚೋರುನೂರು ಹೋಬಳಿಯ ತುಂಬರಗುದ್ದಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ಗ್ರಾಮದಲ್ಲಿನ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.
ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ:
ಬಳ್ಳಾರಿ ತಾಲೂಕಿನ ರೂಪನಗುಡಿ ಹೋಬಳಿಯ ಇಬ್ರಾಹಿಂಪುರ ಗ್ರಾಮದಲ್ಲಿ ಬಳ್ಳಾರಿ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿರುಗುಪ್ಪ ತಾಲೂಕಿನ ಸಿರುಗುಪ್ಪ ಹೋಬಳಿಯ ಶ್ರೀಧರಗಡ್ಡೆ ಗ್ರಾಮದಲ್ಲಿ ಸಿರುಗುಪ್ಪ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕುರುಗೋಡು ತಾಲೂಕಿನ ಕುರುಗೋಡು ಹೋಬಳಿಯ ಓರ್ವಾಯಿ ಗ್ರಾಮದಲ್ಲಿ ಕುರುಗೋಡು ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಂಪ್ಲಿ ತಾಲೂಕಿನ ಕಂಪ್ಲಿ ಹೋಬಳಿಯ ಉಪ್ಪಾರಹಳ್ಳಿ ಗ್ರಾಮದಲ್ಲಿ ಕಂಪ್ಲಿ ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವ್ಯಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಹಾಗೂ ಅಧಿಕಾರಿಗಳು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ.