ಪ್ರಜಾಪ್ರಭುತ್ವದ ಯಶಸ್ವಿಗೆ ನೀವೇ ಭಾಜ್ಯರು: ಸಿದ್ದರಾಮ ಕಲ್ಮಠ

0
183

ಕೊಟ್ಟೂರು.ಕೊಟ್ಟೂರೇಶ್ವರ ಮಹಾವಿದ್ಯಾಲಯ ಕೊಟ್ಟೂರು ಹಾಗೂ ತಾಲೂಕು ಆಡಳಿತ ಕಚೇರಿ ಜಿಲ್ಲಾ ಪಂಚಾಯಿತಿ ಜಿಲ್ಲಾ ಸ್ವೀಪ್ ಸಮಿತಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಏನ್ ಎಸ್ ಎಸ್ ಹಾಗೂ ಏನ್ ಸಿ ಸಿ IQAC ಸಹಭಾಗಿತ್ವದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಕೊಟ್ಟೂರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ಪ್ರತಿಜ್ಞಾವಿಧಿಯನ್ನು ಬೋಧಿಸಿದ ಮಾನ್ಯ ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷರಾದ ಮಾನ್ಯ ಸಿದ್ದರಾಮ ಕಲ್ಮಠ ಸರ್ ಅವರು ಮಾತನಾಡಿ ಪ್ರಜಾಪ್ರಭುತ್ವದ ಆಶಯಗಳು ಮತ್ತು ಮೌಲ್ಯಗಳನ್ನು ಮುಂದಿನ ಮತದಾರರು ನೀವು ಹಾಗಾಗಿ ಪ್ರಜಾಪ್ರಭುತ್ವದ ಯಶಸ್ವಿಗೆ ನೀವೇ ಭಾಜನರಾಗುತ್ತೀರ ಎಂದು ಹೇಳಿದರು.

ನಂತರ ಮಾತನಾಡಿದ ಕಾರ್ಯಕ್ರಮದ ಉಪಸ್ಥಿತಿಯನ್ನು ವಹಿಸಿದಂತ ಪ್ರಾಂಶುಪಾಲರಾದ ಪ್ರೊಫೆಸರ್ ಶಾಂತಮೂರ್ತಿ ಕುಲಕರ್ಣಿ ಮಾತನಾಡಿ ಮತದಾರರು ಮತದಾನವನ್ನ ಮಾಡುವುದು ಅಗತ್ಯ ಮತ್ತು ಮಹತ್ವವನ್ನು ಇಂದಿನ ಆಧುನಿಕ ಯುಗಕ್ಕೆ ಅನಿವಾರ್ಯ ಎಂದು ಹೇಳಿದರು

ವಿಶೇಷ ಉಪನ್ಯಾಸವನ್ನು ನೀಡಿದ ಇಂದು ಕಾಲೇಜಿನ ಉಪನ್ಯಾಸಕರಾದ ಎಂ ರವಿಕುಮಾರ್ ಅವರು ಮಾತನಾಡಿ ಪ್ರಜಾಪ್ರಭುತ್ವ ಪ್ರಜೆಗಳಿಂದ ಪ್ರಜಾಪ್ರಭುತ್ವದ ಮಾದರಿಯನ್ನು ಯಶಸ್ವಿಗೊಳಿಸಲು ರಾಷ್ಟ್ರೀಯ ಮತದಾರರ ದಿನಾಚರಣೆ ಅರ್ಥಪೂರ್ಣ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯ್ತಿಯ ಮುಖ್ಯ ಅಧಿಕಾರಿ ನಸರುಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಭಾಗವಹಿಸಿ ಯಶಸ್ವಿಗೊಳಿಸಿದರು ಕಾರ್ಯಕ್ರಮದ ನಿರೂಪಣೆಯನ್ನು ಅರವಿಂದ್ ಬಸಾಪುರ ಉಪನ್ಯಾಸಕರು.ಸ್ವಾಗತವನ್ನು ಪ್ರೊಫೆಸರ್ ರಾಧಾಸ್ವಾಮಿ ಸಹಾಯಕ ಪ್ರಾಧ್ಯಾಪಕರು ರಾಜ್ಯಶಾಸ್ತ್ರ ವಿಭಾಗ. ವಂದನಾರ್ಪಣೆಯನ್ನು ಶಶಿಕುಮಾರ್ ಶಿಕ್ಷಕರ ನೆರವೇರಿಸಿದರು

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here