ಬಳ್ಳಾರಿ ಜಿಲ್ಲೆಯ ಗ್ರಾಮೀಣ ಇಲ್ಲಾ ಸಂಡೂರಿನಿಂದ: ಶ್ರೀ ರಾಮುಲು ಸ್ಪರ್ದೆ

0
273

ಬಳ್ಳಾರಿ, ಜ.26: ಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಈ ಬಾರಿ ಬಳ್ಳಾರಿ ಜಿಲ್ಲೆಯಿಂದಲೇ ಸ್ಪರ್ಧೆ ಮಾಡುವೆ. ಅದರಲ್ಲೂ ನನ್ನ ಸ್ವಕ್ಷೇತ್ರ ಬಳ್ಳಾರಿ ಗ್ರಾಮೀಣ ಇಲ್ಲಾ ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವೆ ಎಂದು ಮೊಳಕಾಲ್ಮುರು ಶಾಸಕ, ಸಾರಿಗೆ ಸಚಿವ ಬಿ.ಶ್ರೀರಾಮಯಲು ಅವರು ಹೇಳಿದ್ದಾರೆ.

ಅವರು ಬಳ್ಳಾರಿ ನಗರದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನನ್ನ ಬಯಕೆ ಇದಾದರೆ, ಅಂತಿಮವಾಗಿ ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಮೊದಲ ಬಾರಿಗೆ ಸ್ವತಃ ಶ್ರೀರಾಮುಲು ಅವರು ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಿರುವುದು. ಈವರೆಗೆ ಅಲ್ಲಿ ಸ್ಪರ್ಧೆ ಮಾಡಬೇಕೆಂದು ಪಕ್ಷ ಸಂಘಟನೆ ಮಾಡಿದ್ದ ಬಳ್ಳಾರಿಯ ಕೆ.ಎಸ್.ದಿವಾಕರ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆ ಇದೆ.

ಲಭ್ಯ ಮಾಹಿತಿ ಪ್ರಕಾರ ಪಕ್ಷವೇ ಈವರೆಗೂ ಕಾಂಗ್ರೆಸ್ ಪಕ್ಷದ ಭದ್ರ ಕ್ಷೇತ್ರವಾಗಿರುವ ಸಂಡೂರಿನಲ್ಲಿ ಶ್ರೀರಾಮುಲು ಅಂತಹ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿನ ಪ್ರಯತ್ನ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here