ವಿಜಯನಗರ ಜಿಲ್ಲೆ, ಕೊಟ್ಟೂರು ತಾಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ ಹೊರ ವಲಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ನಿರ್ಮಾಣ ಮಾಡಿರುವ ಅಮೃತ ಸರೋವರ ಕೆರೆಯಲ್ಲಿ ಗ್ರಾಪಂ ಅಧ್ಯಕ್ಷೆ ರೂಪಾ ಸುರೇಶ್ ಗೌಡರ ಧ್ವಜಾರೋಹಣ ನೆರವೇರಿಸಿದರು.
ಪ್ರೌಢಶಾಲಾ ಮಕ್ಕಳಿಗೆ ನೀರಿನ ಸಂರಕ್ಷಣೆಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ(ಗ್ರಾ.ಉ) ವಿಜಯಕುಮಾರ್, ತಾಂತ್ರಿಕ ಸಂಯೋಜಕ ಶ್ರೀಕಾಂತ್, ಐಇಸಿ ಸಂಯೋಜಕ ಪ್ರಭುಕುಮಾರ್ ಉಪ್ಪಾರ, ಪಿಡಿಒ ದೇವೇಶ್, ಸದಸ್ಯರಾದ ಟಿ.ಎಂ.ನೀಲಮ್ಮ, ಅಡವಿಸ್ವಾಮಿ, ಸಿದ್ದಲಿಂಗಸ್ವಾಮಿ, ಕೆಂಚನಗೌಡ, ಲಿಂಗನಗೌಡ, ಹಂಪಣ್ಣ, ತಾಂತ್ರಿಕ ಸಹಾಯಕ ರವಿನಾಯ್ಕ್, ಬಿಎಫ್ ಟಿ ದುರುಗೇಶ್, ಗ್ರಾಪಂ ಸಿಬ್ಬಂದಿ ಇದ್ದರು.
ವರದಿ: ಶಿವರಾಜ್ ಕನ್ನಡಿಗ