ನೂತನ ಪಟ್ಟಣ ಪಂಚಾಯಿತಿಯ ಕಚೇರಿಯ ಆವರಣದಲ್ಲಿ 74ನೇ ಗಣರಾಜ್ಯೋತ್ಸವ ಆಚರಿಸಿದ ಮುಖ್ಯಧಿಕಾರಿ ಎ. ನಸ್ರುಲ್ಲಾ

0
96

ಕೊಟ್ಟೂರು
ನೂತನ ಪಟ್ಟಣ ಪಂಚಾಯಿತಿ ಕಚೇರಿಯ ಆವರಣದಲ್ಲಿ ಮುಖ್ಯಧಿಕಾರಿ ಎ. ನಸ್ರುಲ್ಲಾ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷೆ. ಶ್ರೀಮತಿ ಭಾರತಿ ಸುಧಾಕರ್ ಪಾಟೀಲ್ ರವರು 74 ನೇ ಗಣರಾಜ್ಯೋತ್ಸವ ಅಂಗವಾಗಿ ಮಹಾತ್ಮ ಗಾಂಧೀಜಿ, ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಧ್ವಜಾರೋಹಣ ಕಾರ್ಯಕ್ರಮವನ್ನು ನೆರೆವರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ. ಶ್ರೀಮತಿ ಭಾರತಿ ಸುಧಾಕರ್ ಪಾಟೀಲ್ ರವರು 1947 ಆಗಸ್ಟ್ 15 ರಂದು ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ ಜನವರಿ 26.1950 ರಂದು ಭಾರತ ತನ್ನ ಸಂವಿಧಾನ ಜಾರಿಗೊಳಿಸಿದ ದಿನವಾಗಿದೆ ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜವಾದ ಅಸ್ತಿತ್ವವನ್ನು ಸ್ಥಾಪಿಸಿದ ದಿನವಾಗಿದೆ
ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here