ಅದ್ದೂರಿಯಾಗಿ ಜರುಗಿದ ಮರುಳಸಿದ್ದೇಶ್ವರ ರಥೋತ್ಸವ ತೂಲಹಳ್ಳಿ

0
79

ಕೊಟ್ಟೂರು: ತಾಲೂಕಿನ ತೂಲಹಳ್ಳಿ ಗ್ರಾಮದ ವಿಶ್ವಬಂಧು ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವವು ಶುಕ್ರವಾರ ಸಂಜೆ ನೆರೆದಿದ್ದ ಅಪಾರ ಭಕ್ತ ಸಾಗರ ಸಮ್ಮುಖದಲ್ಲಿ ಅದ್ದೂರಿಯಾಗಿ ರಥೋತ್ಸವ ಜರಗಿತು.

ಸ್ವಾಮಿಯ ದೇವಸ್ಥಾನದಲ್ಲಿ ಅರ್ಚಕರು ಧಾರ್ಮಿಕ ಪೂಜೆ ವಿಧಿ ವಿಧಾನಗಳನ್ನು ನೆರವೇರಿಸಿ ನಂತರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಲಾಯಿತು. ಸಕಲ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ರಥ ಬಯಲಿಗೆ ಪಲ್ಲಕ್ಕಿ ಉತ್ಸವ ಸಾಗಿ ಪ್ರದಕ್ಷಿಣೆ ಹಾಕಿ ಸ್ವಾಮಿ ರಥವೇರುತ್ತಿದ್ದಂತೆ ಭಕ್ತರ ಜಯ ಘೋಷ ಮೊಳಗಿತು. ರಥ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತ ಸಮೂಹವು ಬಾಳೆಹಣ್ಣು ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಸುತ್ತಮುತ್ತಲಿನ ಗ್ರಾಮಗಳು ಭಕ್ತಿಗೆ ಸಾಕ್ಷಿಯಾದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here