ಕಂಪ್ಲಿಯಲ್ಲಿ ಸ್ನಾತಕೋತ್ತರ ಪದವಿ ಕಾಲೇಜ್ ತೆರೆಯುವಂತೆ ಎಸಿಎಸ್ ಗೆ ಮನವಿ- ಮೋಹನ್ ಕುಮಾರ್ ದಾನಪ್ಪ

0
978

ಬೆಂಗಳೂರು: ಏ6, ಬಳ್ಳಾರಿ ಜಿಲ್ಲೆಯ ನೂತನ ತಾಲೂಕು ಕೇಂದ್ರವಾದ ಕಂಪ್ಲಿ ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜ್ ತೆರೆಯುವಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಸ್. ಆರ್. ಉಮಾ ಶಂಕರ್ ರವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮನವಿ ಸಲ್ಲಿಸಿದರು!

ಬಳ್ಳಾರಿ ಜಿಲ್ಲೆಯ ಕಂಪ್ಲಿ ಹೋಬಳಿಯು 2017ರಲ್ಲಿ ನೂತನ ತಾಲೂಕು ಕೇಂದ್ರವಾಗಿ ಹೊರಹೊಮ್ಮಿರುವುದು ತಿಳಿದ ಸಂಗತಿಯಾಗಿರುತ್ತದೆ, ಕಂಪ್ಲಿ ನಗರದಲ್ಲಿ ಸರ್ಕಾರಿ ಪದವಿ ಕಾಲೇಜ್ ಹಾಗೂ ಖಾಸಗಿ ಪದವಿ ಕಾಲೇಜ್‌ಗಳಿದ್ದು ಪ್ರತಿ ವರ್ಷ ಕಂಪ್ಲಿ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಿಂದ ಸುಮಾರು ವರ್ಷಕ್ಕೆ 150 ರಿಂದ 200 ಜನ ವಿಧ್ಯಾರ್ಥಿಗಳು ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ಸ್ನಾತಕೋತ್ತರ ಪದವಿ (ಎಂಎ, ಎಂ.ಕಾಂ) ವಿದ್ಯಾಭ್ಯಾಸಕ್ಕಾಗಿ ಕಂಪ್ಲಿ ನಗರದಿಂದ ದೂರದ ಬಳ್ಳಾರಿ ಮತ್ತು ಕೊಪ್ಪಳ, ಗಂಗಾವತಿಗೆ ತೆರಳಬೇಕಾಗಿರುತ್ತದೆ. ಅಲ್ಲದೆ ಕಂಪ್ಲಿ ತಾಲೂಕಿನ ವಿದ್ಯಾರ್ಥಿಗಳು ದೂರದ ಬಳ್ಳಾರಿ, ಕೊಪ್ಪಳ, ಗಂಗಾವತಿಗೆ ವಿದ್ಯಾಭ್ಯಾಸಕ್ಕೆ ತೆರಳಲು ಕಂಪ್ಲಿ ತಾಲೂಕಿನಲ್ಲಿನ ತಮ್ಮ ಸ್ವಗ್ರಾಮಗಳಿಂದ ಕಂಪ್ಲಿ ನಗರಕ್ಕೆ ಪ್ರಯಾಣಿಸಿ ನಂತರ ಕಂಪ್ಲಿ ನಗರದಿಂದ 52 ಕಿಮೀ ದೂರದ ಬಳ್ಳಾರಿಗೆ, ಅದೇ ರೀತಿ 54 ಕಿಮೀ ದೂರದ ಕೊಪ್ಪಳ, 15ಕಿಮೀ ದೂರದ ಗಂಗಾವತಿಗೆ ಪ್ರಯಾಣಿಸಿ ಹರಸಾಹಸ ಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವುದು ದುರ್ದೈವ, ಹಾಗೂ ವಿದ್ಯಾಲಯಗಳ ನಿಯಮದಂತೆ ನಿಗದಿ ಪಡಿಸಿದ ಸೀಟ್‌ಗಳು ಭರ್ತಿಯಾದ ನಂತರ ದೂರದ ಹುಬ್ಬಳ್ಳಿ-ಧಾರವಾಡ, ಬೆಂಗಳೂರಿಗೆ ತೆರಳಿ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಸುಮಾರು ವರ್ಷಗಳಿಂದ ನಡೆದುಕೊಂಡು ಬಂದಿರುವುದು ವಿಧ್ಯಾರ್ಥಿಗಳಿಗೆ ಪೋಷಕರಿಗೆ ಆರ್ಥಿಕ ಹೊರೆಯಾಗಿರುತ್ತದೆ ಹಾಗೂ ಕೆಲವು ವಿದ್ಯಾರ್ಥಿಗಳು, ಪೋಷಕರು ಆರ್ಥಿಕ ಹೊರೆ ಹೊರಲಾರದೇ ಮಕ್ಕಳನ್ನ ವಿದ್ಯಾಭ್ಯಾಸಕ್ಕೆ ದೂರದೂರಿಗೆ ಕಳುಹಿಸಲು ಇಚ್ಚಿಸದೇ ಹಿಂಜರಿದು ಸ್ಥಗಿತಗೊಳಿಸಿರುವುದು ಬೇಸರದ ಸಂಗತಿಯಾಗಿರುತ್ತದೆ,

ಆದ್ದರಿಂದ ನೂತನವಾಗಿ ತಾಲೂಕು ಕೇಂದ್ರವಾಗಿ ಹೊರಹೊಮ್ಮಿರುವ ಕಂಪ್ಲಿಯು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರಲಿದ್ದು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಕೊಠಡಿಗಳಿದ್ದು ಅಲ್ಲಿಯೇ ಸ್ನಾತಕೋತ್ತರ ಪದವಿ, ಎಂಎ, ಎಂ.ಕಾಂ ತರಗತಿಗಳನ್ನು ಪ್ರಸ್ತುತದ ಈ ಅಕಾಡೆಮಿಕ್ ವರ್ಷದಿಂದಲೇ ತ್ವರಿತವಾಗಿ ಸ್ನಾತಕೋತ್ತರ ಪದವಿ ಕಾಲೇಜ್‌ನ್ನು ಸ್ಥಾಪಿಸಲು ಅಗತ್ಯ ಪ್ರಕ್ರಿಯೆಗಳನ್ನು ಕೂಡಲೇ ಕೈಗೊಳ್ಳುವಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮನವಿ ಸಲ್ಲಿಸಿದರು,

ಮನವಿ ಸ್ವೀಕರಿಸಿದ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಸ್ ಆರ್ ಉಮಾ ಶಂಕರ್ ರವರು ಕೂಡಲೇ ಸ್ಥಳೀಯ ವಿಶ್ವವಿದ್ಯಾಲಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ತಿಳಿಸಿದರು!

LEAVE A REPLY

Please enter your comment!
Please enter your name here