ಅದ್ದೂರಿಯಾಗಿ ಜರುಗಿದ ಉಜ್ಜಿನಿ ಶ್ರೀ ಮರುಳಸಿದ್ಧೇಶ್ವರ ಸ್ವಾಮಿಯ ರಥೋತ್ಸವ

0
316

ಕೊಟ್ಟೂರು:ಏ:26:-ಪಂಚಪೀಠಗಳಲ್ಲಿ ಒಂದಾಗಿರವ ನಾಡಿನ ಪ್ರಸಿದ್ಧ ಉಜ್ಜಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ರಥೋತ್ಸವ ಮಂಗಳವಾರ ಸಂಜೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ಶ್ರೀಸ್ವಾಮಿಯ ಪಟಾಕ್ಷಿಯನ್ನು 3.50 ಲಕ್ಷ ರೂ.ಗೆ ಹಂಪನೂರ ರೇವಣಸಿದ್ದಪ್ಪ ಸವಾಲಿನಲ್ಲಿ ಪಡೆದು ಕೊಂಡರು.

ಪಟಾಕ್ಷಿ ಸವಾಲು ಮುಗಿಯುತ್ತಿದ್ದಂತೆ ಶ್ರೀ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಮಳೆ ಬೆಳೆ ಸಮೃದ್ಧವಾಗಿ ಆಗಿ ರೈತರು ಬದುಕು ಅಸನಾಗಲಿ,ನಾಡಿನ ಭಕ್ತರಿಗೆ ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ಸರ್ವವನ್ನು ಕಲ್ಪಿಸಿ ಸನ್ಮಂಗಲ ನಿರ್ಮಾಣಮಾಡಲಿ ಎಂದು ಅಶಿರ್ವಾಚನ ನೀಡಿ ವೈಭವದ ರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ ರಥವನ್ನು ಎಳೆದೊಯ್ದರು.

ರಥವನ್ನು ಪಾದಗಟ್ಟಿವರೆಗೆ ಎಳೆದೊಯ್ದು ಮತ್ತೆ ಮರಳಿ ಮೂಲಸ್ಥಾನಕ್ಕೆ ಎಳೆತ್ತಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಯಲ್ಲಿ ಪ್ರತಿಷ್ಠಾಪಿಸಿ ಶ್ರೀಮಠಕ್ಕೆ ತಂದು ಮಠದಲ್ಲಿ ಪ್ರತಿಷ್ಠಾಪಿಸಿ ಮೂರ್ತಿಗೆ ಮಂಗಳಾರತಿ ಬೆಳಗಿ ಉತ್ಸವದ ಸಂಭ್ರಮಕ್ಕೆ ವಿರಾಮ ನೀಡಲಾಯಿತು.

ನಾಡಿನ ಮೂಲೆ ಮೂಲೆಗಳಿಂದ ಬಂದಿದ್ದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ಧನ್ಯತೆ ಪಡೆದರು.

ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ರಥೋತ್ಸವದ ಕಾರ್ಯಕ್ರಮದಲ್ಲಿ ಮೊದಲು ಸ್ವಾಮಿಯ ಉತ್ಸವಮೂರ್ತಿಯನ್ನು ಕರೆತಂದು ರಥಕ್ಕೆ ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾನ ಮಾಡಲಾಯಿತು.

ಸಮಾಳ, ನಂದಿಕೋಲು ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ನೆರೆದಿದ್ದ ಲಕ್ಷಾಂತರ ಭಕ್ತರು ಜಯಘೋಷಣೆ ಕೂಗುತ್ತ ರಥವನ್ನು ಮುಂದೆ ಎಳೆದುಕೊಂಡು ಹೋದರು. ನಂತರ ಪಾದಗಟ್ಟೆ ಮುಟ್ಟಿ ಶ್ರೀ ಸ್ವಾಮಿಯ ಪೂಜೆ ಸಲ್ಲಿಸಿ ಮತ್ತೆ ಮರಳಿ ಬಂದು ನೆಲೆ ನಿಲ್ಲಿಸಲಾಯಿತು.

LEAVE A REPLY

Please enter your comment!
Please enter your name here