ಸಂಡೂರು ತಾಲೂಕಿನ ತಾರಾನಗರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಕೆ.ಎಸ್.ದಿವಾಕರ್ ಅವರು ಅಪಾರ ಸಂಖ್ಯೆಯ ಸಮ್ಮುಖದಲ್ಲಿ ಪ್ರಚಾರಗೊಂಡು ಗುರುವಾರ ಫುಟ್ಬಾಲ್ ಗುರುತಿಗೆ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು.
ನಂತರ ಕೆ.ಎಸ್.ದಿವಾಕರ್ ಮಾತನಾಡಿ, ಸಂಡೂರು ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು, ಈ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಲು ಮತದಾರರು ನಿರ್ಧರಿಸಿದ್ದಾರೆ.
ವಿರೋಧ ಪಕ್ಷಗಳಿಗೆ ಈ ಚುನಾವಣೆಯಲ್ಲಿ ಫುಟ್ಬಾಲ್ ಆಟ ಆಡಲಿದ್ದಾರೆ ಕ್ಷೇತ್ರದ ಜನರು. ಪ್ರೀತಿ, ಅಭಿಮಾನದಿಂದಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಹಾಗೂ ಕಾರ್ಯಕರ್ತರು ನಮ್ಮನ್ನು ಅದ್ಧೂರಿಯಾಗಿ ಸ್ವಾಗತಿಸಿರುವುದನ್ನು ಕಂಡಿದ್ದು, ಗೆಲುವಿನ ಆಶೀರ್ವಾದ ನೀಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಶಂಕರ್ ಸೇರಿದಂತೆ ಅಭಿಮಾನಿಗಳು, ಕಾರ್ಯಕರ್ತರಿದ್ದರು.
ವರದಿ; ಗೋಪಾಲ್