ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವ ಸ್ವಚ್ಛತಾ ರಥ ವಾಹನಕ್ಕೆ ಸಿಇಒ ಚಾಲನೆ ಸ್ವಚ್ಛತೆಗೆ ಆದ್ಯತೆ ನೀಡುವುದರ ಮೂಲಕ ಪರಿಸರ ಕಾಪಾಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು

0
80

ಬಳ್ಳಾರಿ,ಮೇ 23: ಸಮುದಾಯದ ಅಭ್ಯುದಯಕ್ಕಾಗಿ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಿಂದಲೇ ಸ್ವಚ್ಛತೆಗೆ ಆದ್ಯತೆ ನೀಡಿದರೆ ರೋಗ ರುಜಿನಗಳ ಹರಡುವಿಕೆ ತಡೆಗಟ್ಟಿ ಪರಿಸರವನ್ನು ಕಾಪಾಡಬಹುದು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೇಫ್ ಹಾಗೂ ವಲ್ರ್ಡ್ ವಿಷನ್ ಇಂಡಿಯಾ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದಂದು ಜಿಲ್ಲಾ ಪಂಚಾಯತ್‍ನ ಕಚೇರಿ ಮುಂಭಾಗದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಸ್ವಚ್ಛತಾ ರಥ ವಾಹನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಅವರು ಮಾತನಾಡಿದರು.

ಈ ವಾಹನವು ಬಳ್ಳಾರಿ ತಾಲೂಕಿನ ಸುಮಾರು 66 ಗ್ರಾಮಗಳಲ್ಲಿ ಸಂಚರಿಸಲಿದೆ.
ಶೌಚಾಲಯ ಬಳಕೆಯ ಮಹತ್ವ, ಹಸಿ ಕಸ, ಒಣ ಕಸ ವಿಂಗಡಣೆ ಮತ್ತು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುಚಕ್ರ ಮತ್ತು ನೈರ್ಮಲ್ಯದ ಕುರಿತು, ಕೈತೊಳೆಯುವ ವಿಧಾನಗಳು, ಮಕ್ಕಳಿಗೆ ಒಂದು ವರ್ಷ ವಯಸ್ಸಿನೊಳಗೆ ನೀಡುವ ಲಸಿಕೆಗಳ ಮೂಲಕ ಬಾಲ್ಯದಲ್ಲಿ ಕಾಡುವ ರೋಗಗಳ ನಿಯಂತ್ರಣ, ಬಾಲ್ಯವಿವಾಹ ತಡೆಗಟ್ಟುವಿಕೆ ಮಾಹಿತಿಯನ್ನ ಆಡಿಯೋ ಕ್ಲಿಪ್ಲಿಂಗ್‍ಗಳ ಮೂಲಕ ಜಾಗೃತಿ ಮೂಡಿಸಲಾಗುವುದು.

ಸ್ವಚ್ಛತೆಯ ಕುರಿತು ಕರಪತ್ರಗಳೊಂದಿಗೆ ಆಯಾ ಗ್ರಾಮಗಳ ಗ್ರಾಮ ಪಂಚಾಯತಿ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ಮಾಹಿತಿ ನೀಡಲಾಗುವುದು. ಎಲ್ಲರೂ ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಚ್ಛತೆ ಕುರಿತು ಮಾಹಿತಿ ಇರುವ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕ ಪ್ರಮೋದ್.ಸಿ,
ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್‍ಕುಮಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಮತ್ತು ವಲ್ರ್ಡ್ ವಿಷನ್ ಇಂಡಿಯಾ ಎಡಿಪಿ ವ್ಯವಸ್ಥಾಪಕಿ ಪ್ರೇಮಲತಾ ಸೇರಿದಂತೆ ಜಿಲ್ಲಾ ಪಂಚಾಯತ್‍ನ ಸ್ವಚ್ಛ ಭಾರತ ತಂಡದ ಸಿಬ್ಬಂದಿಯವರು ಹಾಜರಿದ್ದರು.

LEAVE A REPLY

Please enter your comment!
Please enter your name here