ಮಡಿಕೇರಿ ಜೂ.30:-ವಿಶ್ವ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾರಾಗೃಹದಲ್ಲಿ ಬಂದಿನಿವಾಸಿಗಳಿಗೆ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಸಂಜಯ್ ಜಿತ್ತಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಟಿ.ಡಿ.ಪುಟ್ಟರಂಗಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಪಾಲ್ಗೊಂಡಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವ ಪಲ್ಲೇದ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಹ ಕಾರ್ಯದರ್ಶಿ ಎಚ್.ಆರ್.ಮುತ್ತಪ್ಪ, ಸ್ಥಾನಿಕ ಆಯುಕ್ತರಾದ ಅಜ್ಜಮಕ್ಕಡ ವಿನು ಕುಮಾರ್, ಕಾರ್ಯದರ್ಶಿ ಸ್ಥಳೀಯ ಸಂಸ್ಥೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಧನಲಕ್ಷ್ಮಿ, ಯೋಗ ತರಬೇತಿದಾರರಾದ ಅಲಿಮ ಪಿ.ಎಚ್, ವಾಟೆಕಾಡು ಹಿರಿಯ ಪ್ರಾಥಮಿಕ ಶಾಲೆ ಸ್ಕೌಟ್ ಮಾಸ್ಟರ್ ಶಿಕ್ಷಕರು ಕುಮಾರಸ್ವಾಮಿ, ಅಲ್ಲದೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಸಂಘಟಕರಾದ ಯು.ಸಿ.ದಮಯಂತಿ ಉಪಸ್ಥಿತರಿದ್ದರು.