ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಮಳವಳ್ಳಿ ತಾಲ್ಲೂಕು ಕಚೇರಿಯ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ಕಡತ ಪರಿಸೀಲಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ಸಮಸ್ಯೆಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.
ಮಳವಳ್ಳಿ ತಾಲ್ಲೂಕು ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಕಚೇರಿಯಲ್ಲಿ ಸಿಸಿಟಿವಿ ಇಲ್ಲದಿರುವುದನ್ನು ಗಮನಿಸಿ, ಕಚೇರಿಗೆ ಸಿಸಿಟಿವಿಯನ್ನು ಅಳವಡಿಸಿ ಪಾರದರ್ಶಕತೆಯಿಂದ ಕೆಲಸ ನಿರ್ವಹಣೆ ಮಾಡಲು ಉಪ ನೋಂದಣಾಧಿಕಾರಿಗಳಿಗೆ ಸೂಚಿಸಿದರು.
ನಂತರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಹೊರ ಮತ್ತು ಒಳ ರೋಗಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಚಿಕಿತ್ಸೆಗೆ ಬರುವ ರೋಗಿಗಳನ್ನು ನಿರ್ಲಕ್ಷ್ಯವಹಿಸದೇ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದರು.