ಹೊಸಪೇಟೆ : ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆಯ ವಾಸುದೇವ ಮೇಟಿ ಬಣದ ಕಾರ್ಯಕರ್ತರು ಗುರುವಾರ ನೂತನ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.
ಬಳಿಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಎ.ಸಿ.ನೋಂಜಾಯಿ ಮಹಮ್ಮದ್ ಅಲಿ ಅಕ್ರಂ ಷಾ ಅವರನ್ನು ಸಹ ಸ್ವಾಗತಿಸಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ, ಗೌರವಾಧ್ಯಕ್ಷ ವೆಂಕೋಬಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಯ್ಯ, ಕಾರ್ಯದರ್ಶಿ ವೆಂಕಟೇಶ, ಖಜಾಂಚಿ ಹನುಮಂತ, ವೆಂಕಟೇಶ, ನಾಗರಾಜ, ದ್ಯಾಮಜ್ಜ ಇದ್ದರು.
ವರದಿ:-ಬ್ರಹ್ಮಯ್ಯ..