ಹದಗೆಟ್ಟ ರಸ್ತೆ; ಜನಪ್ರತಿನಿಧಿಗಳಿಗೆ ಹಿಡಿಶಾಪ..!!

0
151

ಕೊಟ್ಟೂರು ತಾಲ್ಲೂಕಿನ ಅಂಬಳಿ ಯ ಆಶ್ರಯ ಕಾಲೋನಿಯ ಮಧ್ಯೆ ಇರುವ  ಹದೆಗಟ್ಟಿರುವ ರಸ್ತೆಯಲ್ಲಿ ದಿನಾಲು ನೂರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಿದ್ದು ಅದು ಅಲ್ಲದೆ ಬೇವೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳು ಇಲ್ಲಿ ದಿನಾಲು ಸಂಚರಿಸುತ್ತಿದ್ದು.

ಅಂಬಳಿ ಗ್ರಾಮದ ಸಾರ್ವಜನಿಕರು ತಮ್ಮ ವ್ಯಾಪಾರ ವಹಿವಾಟುಗಳಿಗೆ ಕೊಟ್ಟೂರಿಗೆ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು ಪ್ರಸ್ತುತ ಮಳೆಗಾಲದಲ್ಲಿ ಈ ರಸ್ತೆ ಸಂಚಾರಕ್ಕೆ  ಯೋಗ್ಯವಾಗಿಲ್ಲ ಮತ್ತು ತೀರ ದುಸ್ಥಿತಿ ಉಂಟಾಗಿದೆ

ಈ ರಸ್ತೆಯಲ್ಲಿ ಇಲ್ಲಿಯವರೆಗೆ ಹತ್ತಾರು ಮೋಟರ್ ಸೈಕಲ್ ವಾಹನಗಳ ಸವಾರರು ಅಪಘಾತಕ್ಕೆ ಒಳಗಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಈ ರಸ್ತೆಯನ್ನು ಸರಿಪಡಿಸಿಗೊಳಿಸಬೇಕೆಂದು. ಅಂಬಳಿ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದರ ಬಗ್ಗೆ ಅಸಡ್ಡೆ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ಮತ್ತು ಕೊಟ್ಟೂರು ತಾಲೂಕು ಜೆಡಿಎಸ್ ಅಧ್ಯಕ್ಷರಾದ ಸೋಮಶೇಖರ್ ಪತ್ರಿಕೆಗೆ ತಿಳಿಸಿದ್ದಾರೆ.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here