ಕ್ರೀಡೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಿ: ತಹಸೀಲ್ದಾರ್ ಅಮರೇಶ್ ಜಿ ಕೆ

0
121

ವಿಜಯನಗರ ,ಬಳ್ಳಾರಿ ಮತ್ತು ಕೊಟ್ಟೂರು ತಾಲೂಕು ಪದವಿ ಪೂರ್ವ ಕಾಲೇಜುಗಳ ಹಾಗೂ ಕೊಟ್ಟೂರೇಶ್ವರ ಪದವಿ ಪೂರ್ವ ಕಾಲೇಜ್ ಕೊಟ್ಟೂರು ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಎರಡು ದಿನಗಳ 2023 24ನೇ ಶೈಕ್ಷಣಿಕ ಸಾಲಿನ ಕೊಟ್ಟೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಟ್ಟೂರು ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಶ್ರೀ ಅಮರೇಶ್ ಜಿ ಕೆ ವಿದ್ಯಾರ್ಥಿಗಳಲ್ಲಿ ಕ್ರೀಡೆ ಬಹುಮುಖ್ಯವಾದ ಪಾತ್ರ ವಹಿಸುತ್ತದೆ. ವ್ಯಕ್ತಿ ಸದೃಢವಾದ ದೇಹಹೂಂದಿದ್ದರೆ ಸದೃಢವಾದ ಮನಸ್ಸನ್ನು ಹೊಂದಲು ಸಾಧ್ಯ, ಆದ್ದರಿಂದ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಿ, ಹಾಗೂ ಭಾಗವಹಿಸುವುದು ಬಹು ಮುಖ್ಯ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಂ ಜೆ ಹರ್ಷವರ್ಧನ್ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯಚಟುವಟಿಕೆಗಳ ಜೊತೆ ಪಠ್ಯೇತರ ಚಟುವಟಿಕೆಗಳು ಕೂಡ ಬಹು ಮುಖ್ಯ, ಸೋಲು ಗೆಲುವಿನ ಕಡೆಗೆ ಗಮನಕೊಡದೆ ಕ್ರೀಡೆಗಳಲ್ಲಿ ಭಾಗವಹಿಸಿ ಎಂದರು.

ಕಾರ್ಯಕ್ರಮಕದ ಅಧ್ಯಕ್ಷತೆ ವಹಿಸಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೊಟ್ಟೂರೇಶ್ವರ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ ಕ್ರೀಡೆಗಳು ಜೀವನದ ಅನುಭವವನ್ನು ಕಟ್ಟಿಕೊಡುವಂತವುಗಳು ಮುಂದಿನ ಜೀವನದ ಭವಿಷ್ಯಕ್ಕೆ ಸಹಕಾರಿ ಹಾಗೂ ಕ್ರೀಡಾ ಸಾಧನೆಯು ಮುಖ್ಯ ಎಂದರು. ಕೊಟ್ಟೂರು ಎಪಿಎಂಸಿಯ ಮಾಜಿ ಅಧ್ಯಕ್ಷರಾದ ಬೂದಿ ಶಿವಕುಮಾರ್ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಕೊಟ್ಟೂರೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ಎಂ ಹೆಚ್ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕೊಟ್ಟೂರೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಂ ರವಿಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಬಣಕಾರ್ ಬಸವರಾಜ್ ಕ್ರೀಡಾ  ತಂಡಗಳನ್ನು ಪರಿಚಯಿಸಿದರು.ಹಾಗೂ ಕೊಟ್ಟೂರು ತಾಲೂಕಿನ ವಿವಿಧ ಕಾಲೇಜುಗಳ ಪದವಿ ಪೂರ್ವ ಪ್ರಾಚಾರ್ಯರುಗಳಾದ, ಪ್ರದೀಪ್ ಬೂಸ್ನೂರ್ಮಠ್ ಶ್ರೀಮತಿ ನಿರ್ಮಲ ಶಿವನಗುತ್ತಿ ಪಿ ಟಿ ಸಂತೋಷ್ ಕುಮಾರ್ ಕುಮಾರ್, ಜಗದೀಶ್ ಚಂದ್ರ ಬೋಸ್, ಹಾಗೂ ಕೊಟ್ಟೂರೇಶ್ವರ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ಕ್ರೀಡಾ ತರಬೇತಿದಾರರು ಹಾಗೂ ಕ್ರೀಡಾಪಟುಗಳು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಭಾಗವಹಿಸಿದ್ದರು ಕಾರ್ಯಕ್ರಮದ ಸ್ವಾಗತವನ್ನು ಬಿ ಎಸ್ ಪಾಟೀಲ್ ನೆರವೇರಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ವಿಜಯಲಕ್ಷ್ಮಿ ಸಜ್ಜನ್ ಹಾಗೂ ಕೆಎಂ ಪ್ರಭಾಕರ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here