ನನ್ನ ಮಣ್ಣು, ನನ್ನ ದೇಶ ಅಭಿಯಾನ ಯಶಸ್ವಿ ಅಮೃತ ಕಳಸದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಮಣ್ಣು ಹಸ್ತಾಂತರ

0
34

ಹೊಸಪೇಟೆ(ವಿಜಯನಗರ),ಆ.28;; ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಕಾರ್ಯಕ್ರಮದ ಭಾಗವಾಗಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದಲ್ಲಿ ಸಂಗ್ರಹಿಸಿದ

ಮಣ್ಣನ್ನು ಹಸ್ತಾಂತರಿಸಲಾಯಿತು.
ಹೊಸಪೇಟೆ ತಾಲ್ಲೂಕಿನ 14 ಗ್ರಾಮ ಪಂಚಾಯಿತಿ ಭಾಗಗಳಲ್ಲಿ ಸಂಗ್ರಹಿಸಿದ ಮಣ್ಣನ್ನು ಅಮೃತ ಕಳಸದಲ್ಲಿ ಹಾಕಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಬಳ್ಳಾರಿಯ ನೆಹರು ಯುವಕೇಂದ್ರಕ್ಕೆ ವಿಜಯನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಎಂ. ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ಫಾಜಿಲ್ ಅಹ್ಮದ್, ತಾಪಂ ಸಹಾಯಕ ನಿರ್ದೇಶಕಿ ಶಮಿಮ್ ಬಾನು, ತಾಲ್ಲೂಕು ಪಂಚಾಯಿತಿ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ಹೆಚ್.ನಾಗರಾಜ, ತಾಂತ್ರಿಕ ಸಂಯೋಜಕರಾದ ವಿರೇಶ್ ಹಿರೇಮಠ ಹಾಗೂ ಕೊಟ್ರೇಶ ಟಿ.ಪಿ.ಎಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here